Home / ಲೇಖನ / ಇತರೆ / ವಚನ ವಿಚಾರ – ಕೊಡಲಾಗದು

ವಚನ ವಿಚಾರ – ಕೊಡಲಾಗದು

ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ
ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ
ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ
ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ
ಓದು ಒಕ್ಕಾಲು ಬುದ್ಧಿ ಮುಕ್ಕಾಲು ಎಂಬ ಲೋಕದ
ಗಾದೆಮಾತಿನಂತೆ
ಸದ್ಗುರುಕಾರುಣ್ಯವಾದಡೂ ಸಾಧಿಸಿದವನಿಲ್ಲ ಸಕಳೇಶ್ವರಾ

[ಕೈದು-ಆಯುಧ, ನೆನಹ-ಧ್ಯಾನವ]

ಸಕಳೇಶ ಮಾದರಸನ ವಚನ ಇದು. ಒಬ್ಬರು ಇನ್ನೊಬ್ಬರಿಗೆ ಏನು ಕೊಡಬಹುದು, ಕೊಡುವುದರ ಮಿತಿಗಳೇನು ಅನ್ನುವುದನ್ನು ಈ ವಚನ ಹೇಳುತ್ತದೆ. ಕೆರೆಗೆ ಏರಿ ಕಟ್ಟಿಸಬಹುದು ನೀರು ಬರಬೇಕು; ಕೈದು, ಅಂದರೆ ಆಯುಧ, ಕೊಡಬಹುದು, ಆದರೆ ಆಯುಧ ಹಿಡಿದು ಹೋರಾಡಬಲ್ಲ ಶೌರ್ಯ ಮಾತ್ರ ಒಳಗಿನಿಂದಲೇ ಬರಬೇಕು; ಒಳ್ಳೆಯ ಹೆಣ್ಣು ನೋಡಿ ಮದುವೆ ಮಾಡಬಹುದು, ಆದರೆ ಬಾಳುವೆ ನಡೆಸಲು ಬೇಕಾದ ಗಂಡಸುತನ, ಪೌರುಷ, ಇರಬೇಕು, ಹರಸಿದರೆ ಪೌರುಷ ಬರುವುದಿಲ್ಲ. ಮಹತ್ತಾದುದನ್ನು ತೋರಬಹುದು, ಆದರೆ ಕಂಡದ್ದು ನೆನಪು ಉಳಿಯಬೇಕಾದರೆ? ಓದಿ ತಿಳಿದದ್ದು ಕಾಲು ಭಾಗ, ಬುದ್ಧಿಯಿಂದ ಅರಿತದ್ದು ಅದಕ್ಕಿಂತ ಮೂರು ಪಟ್ಟು ಹೆಚ್ಚು. ಗುರುವಿನ ಕಾರುಣ್ಯ ದೊರೆಯಬಹುದು ಆದರೆ ಸಾಧನೆಯ ಜವಾಬ್ದಾರಿ ಮಾತ್ರ ಅವರವರದ್ದೇ.

ನಾವು ಏನಾಗುತ್ತೇವೋ ಅದಕ್ಕೆ ನಾವೇ ಜವಾಬ್ದಾರರು. ನಾವು ಹೇಗಿದ್ದೇವೋ ಅದಕ್ಕೂ ನಾವೇ ಜವಾಬ್ದಾರರು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...