Home / ಲೇಖನ / ಇತರೆ / ವಚನ ವಿಚಾರ – ಕೊಡಲಾಗದು

ವಚನ ವಿಚಾರ – ಕೊಡಲಾಗದು

ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ
ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ
ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ
ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ
ಓದು ಒಕ್ಕಾಲು ಬುದ್ಧಿ ಮುಕ್ಕಾಲು ಎಂಬ ಲೋಕದ
ಗಾದೆಮಾತಿನಂತೆ
ಸದ್ಗುರುಕಾರುಣ್ಯವಾದಡೂ ಸಾಧಿಸಿದವನಿಲ್ಲ ಸಕಳೇಶ್ವರಾ

[ಕೈದು-ಆಯುಧ, ನೆನಹ-ಧ್ಯಾನವ]

ಸಕಳೇಶ ಮಾದರಸನ ವಚನ ಇದು. ಒಬ್ಬರು ಇನ್ನೊಬ್ಬರಿಗೆ ಏನು ಕೊಡಬಹುದು, ಕೊಡುವುದರ ಮಿತಿಗಳೇನು ಅನ್ನುವುದನ್ನು ಈ ವಚನ ಹೇಳುತ್ತದೆ. ಕೆರೆಗೆ ಏರಿ ಕಟ್ಟಿಸಬಹುದು ನೀರು ಬರಬೇಕು; ಕೈದು, ಅಂದರೆ ಆಯುಧ, ಕೊಡಬಹುದು, ಆದರೆ ಆಯುಧ ಹಿಡಿದು ಹೋರಾಡಬಲ್ಲ ಶೌರ್ಯ ಮಾತ್ರ ಒಳಗಿನಿಂದಲೇ ಬರಬೇಕು; ಒಳ್ಳೆಯ ಹೆಣ್ಣು ನೋಡಿ ಮದುವೆ ಮಾಡಬಹುದು, ಆದರೆ ಬಾಳುವೆ ನಡೆಸಲು ಬೇಕಾದ ಗಂಡಸುತನ, ಪೌರುಷ, ಇರಬೇಕು, ಹರಸಿದರೆ ಪೌರುಷ ಬರುವುದಿಲ್ಲ. ಮಹತ್ತಾದುದನ್ನು ತೋರಬಹುದು, ಆದರೆ ಕಂಡದ್ದು ನೆನಪು ಉಳಿಯಬೇಕಾದರೆ? ಓದಿ ತಿಳಿದದ್ದು ಕಾಲು ಭಾಗ, ಬುದ್ಧಿಯಿಂದ ಅರಿತದ್ದು ಅದಕ್ಕಿಂತ ಮೂರು ಪಟ್ಟು ಹೆಚ್ಚು. ಗುರುವಿನ ಕಾರುಣ್ಯ ದೊರೆಯಬಹುದು ಆದರೆ ಸಾಧನೆಯ ಜವಾಬ್ದಾರಿ ಮಾತ್ರ ಅವರವರದ್ದೇ.

ನಾವು ಏನಾಗುತ್ತೇವೋ ಅದಕ್ಕೆ ನಾವೇ ಜವಾಬ್ದಾರರು. ನಾವು ಹೇಗಿದ್ದೇವೋ ಅದಕ್ಕೂ ನಾವೇ ಜವಾಬ್ದಾರರು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...