Home / ಲೇಖನ / ಇತರೆ / ವಚನ ವಿಚಾರ – ಹಸಿವು, ಸುಳ್ಳು, ಅನಿವಾರ್ಯ

ವಚನ ವಿಚಾರ – ಹಸಿವು, ಸುಳ್ಳು, ಅನಿವಾರ್ಯ

ಒಡಲುಗೊಂಡವ ಹಸಿವ
ಒಡಲುಗೊಂಡವ ಹುಸಿವ
ಒಡಲುಗೊಂಡವನೆಂದು
ನೀನೆನ್ನ ಜಡಿದೊಮ್ಮೆ ನುಡಿಯದಿರಾ
ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಕಳಬೇಡ, ಕೊಲಬೇಡ ಎಂದಿತ್ಯಾದಿಯಾಗಿ ಬಸವಣ್ಣ ಹೇಳಿದ್ದಕ್ಕೆ ಪ್ರತಿಯಾದ ಸವಾಲಿನಂತಿದೆ ಈ ಮಾತು. ದೇಹ ಇರುವವರೆಗೆ ಹಸಿವು ಇರುತ್ತದೆ, ಹಸಿವು ಇರುವವರೆಗೆ ಸುಳ್ಳೂ ಇರುತ್ತದೆ. ದೇಹ ಇರುವ ಮನುಷ್ಯ ಹಸಿಯದೆ, ಸುಳ್ಳು ಹೇಳದೆ ಇರಲಾರ. ಸುಮ್ಮನೆ ಒಣ ನೀತಿಯನ್ನು ದೇವರೇ ಹೇಳಿದರೂ ಅದನ್ನು ಒಪ್ಪಲಾರೆ.

ದೇವರೇ, ನೀನು ನನ್ನ ಹಾಗೆ ಒಮ್ಮೆ ದೇಹಧಾರಿಯಾಗಿ ನೋಡು, ಸುಳ್ಳು ಹೇಳದೆ, ಹಸಿವು ಅನುಭವಿಸದೆ ಇರುವುದಕ್ಕೆ ಸಾಧ್ಯವೇ ಎಂದು-ಇದು ಭಕ್ತನ ಸವಾಲು. ಇದು ಸವಾಲೋ, ಸಮರ್ಥನೆಯೋ? ನಾವು ಹೇಳುವ ಸುಳ್ಳುಗಳಿಗೆ ಸಮರ್ಥನೆ ಎಂದು ಈ ವಚನವನ್ನು ನೋಡಬೇಕಾಗಿಲ್ಲ. ಹಸಿವು, ಸುಳ್ಳುಗಳು ಮನುಷ್ಯನಿಗೆ ಅನಿವಾರ್ಯವಾಗುವ ಸ್ಥಿತಿ ಬಂದಿದೆಯಲ್ಲಾ ಅನ್ನುವ ನೋವು ಕಾಣಿಸುತ್ತದೆ. ಹಸಿವನ್ನು, ಸುಳ್ಳನ್ನು ಟೀಕಿಸುವುದಕ್ಕಿಂತ ಅರ್ಥಮಾಡಿಕೊಳ್ಳುವುದು ಮುಖ್ಯ. ಅರ್ಥಮಾಡಿಕೊಂಡರೆ ನಿಜವಾದ ದೇವರಾಗಬಹುದು ಅನ್ನುವ ದೃಷ್ಟಿ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...