Home / ಲೇಖನ / ಇತರೆ / ವಚನ ವಿಚಾರ – ಹಸಿವು, ಸುಳ್ಳು, ಅನಿವಾರ್ಯ

ವಚನ ವಿಚಾರ – ಹಸಿವು, ಸುಳ್ಳು, ಅನಿವಾರ್ಯ

ಒಡಲುಗೊಂಡವ ಹಸಿವ
ಒಡಲುಗೊಂಡವ ಹುಸಿವ
ಒಡಲುಗೊಂಡವನೆಂದು
ನೀನೆನ್ನ ಜಡಿದೊಮ್ಮೆ ನುಡಿಯದಿರಾ
ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡಾ
ರಾಮನಾಥ

ಜೇಡರ ದಾಸಿಮಯ್ಯನ ವಚನ. ಕಳಬೇಡ, ಕೊಲಬೇಡ ಎಂದಿತ್ಯಾದಿಯಾಗಿ ಬಸವಣ್ಣ ಹೇಳಿದ್ದಕ್ಕೆ ಪ್ರತಿಯಾದ ಸವಾಲಿನಂತಿದೆ ಈ ಮಾತು. ದೇಹ ಇರುವವರೆಗೆ ಹಸಿವು ಇರುತ್ತದೆ, ಹಸಿವು ಇರುವವರೆಗೆ ಸುಳ್ಳೂ ಇರುತ್ತದೆ. ದೇಹ ಇರುವ ಮನುಷ್ಯ ಹಸಿಯದೆ, ಸುಳ್ಳು ಹೇಳದೆ ಇರಲಾರ. ಸುಮ್ಮನೆ ಒಣ ನೀತಿಯನ್ನು ದೇವರೇ ಹೇಳಿದರೂ ಅದನ್ನು ಒಪ್ಪಲಾರೆ.

ದೇವರೇ, ನೀನು ನನ್ನ ಹಾಗೆ ಒಮ್ಮೆ ದೇಹಧಾರಿಯಾಗಿ ನೋಡು, ಸುಳ್ಳು ಹೇಳದೆ, ಹಸಿವು ಅನುಭವಿಸದೆ ಇರುವುದಕ್ಕೆ ಸಾಧ್ಯವೇ ಎಂದು-ಇದು ಭಕ್ತನ ಸವಾಲು. ಇದು ಸವಾಲೋ, ಸಮರ್ಥನೆಯೋ? ನಾವು ಹೇಳುವ ಸುಳ್ಳುಗಳಿಗೆ ಸಮರ್ಥನೆ ಎಂದು ಈ ವಚನವನ್ನು ನೋಡಬೇಕಾಗಿಲ್ಲ. ಹಸಿವು, ಸುಳ್ಳುಗಳು ಮನುಷ್ಯನಿಗೆ ಅನಿವಾರ್ಯವಾಗುವ ಸ್ಥಿತಿ ಬಂದಿದೆಯಲ್ಲಾ ಅನ್ನುವ ನೋವು ಕಾಣಿಸುತ್ತದೆ. ಹಸಿವನ್ನು, ಸುಳ್ಳನ್ನು ಟೀಕಿಸುವುದಕ್ಕಿಂತ ಅರ್ಥಮಾಡಿಕೊಳ್ಳುವುದು ಮುಖ್ಯ. ಅರ್ಥಮಾಡಿಕೊಂಡರೆ ನಿಜವಾದ ದೇವರಾಗಬಹುದು ಅನ್ನುವ ದೃಷ್ಟಿ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...