ವಚನ ವಿಚಾರ – ಒಲಿದವರನ್ನು ಕೊಲ್ಲುವುದಕ್ಕೆ

ವಚನ ವಿಚಾರ – ಒಲಿದವರನ್ನು ಕೊಲ್ಲುವುದಕ್ಕೆ

ಒಲಿದವರ ಕೊಲುವಡೆ
ಮಸೆದ ಕೂರಲಗೇಕೆ
ಅವರನೊಲ್ಲೆನೆಂದಡೆ ಸಾಲದೆ
ಮಹಾಲಿಂಗ ಗಜೇಶ್ವರನ ಶರಣರನಗಲಿದಡೆ
ತುಪ್ಪದಲ್ಲಿ ಕಿಚ್ಚ ನಂದಿಸಿದಂತಾದೆನವ್ವಾ

ಗಜೇಶ ಮಸಣಯ್ಯನ ವಚನ. ನಾವು ಪ್ರೀತಿಸಿದವರನ್ನು ಕೊಲ್ಲುವುದಕ್ಕೆ ಮಸೆದು ಹರಿತಮಾಡಿದ ಕತ್ತಿ ಯಾಕೆ ಬೇಕು, `ನೀನು ನನಗೆ ಬೇಡ’ ಅನ್ನುವ ಮಾತೇ ಸಾಕು. ಹಾಗೆಯೇ ಮಹಾಲಿಂಗ ಗಜೇಶ್ವರನ ಶರಣರಿಂದ ಬೇರೆಯಾದರೆ ಸಾಕು, ನನ್ನ ಸ್ಥಿತಿ ತುಪ್ಪದಲ್ಲಿ ನಂದಿಸಿದ ಕಿಚ್ಚಿನಂತಾಗುತ್ತದೆ.

ಪ್ರಿಯಜನರ ವಿರಹವನ್ನು ಕುರಿತು ಹೇಳುವ ತೀವ್ರವಾದ ಮಾತುಗಳು ಇವು. ಮಹಾಲಿಂಗ ಗಜೇಶ್ವರನಿಗೆ ಪ್ರಿಯರಾದವರನ್ನು ದೂರಮಾಡಿಕೊಂಡರೂ ಬೆಂಕಿಯನ್ನು ಆರಿಸಲೆಂದು ತುಪ್ಪ ಹಾಕಿದಂತಾಗುವಾಗ, ಇನ್ನು ಅವನಿಂದಲೇ ದೂರವಾಗಿ ಹೇಗೆ ಉಳಿಯಲಿ? ಅವನು ನನ್ನನ್ನು ಬೇಡವೆಂದರೆ ಏನು ಮಾಡಲಿ?

ಈ ಆತಂಕ ತೀವ್ರವಾಗಿ, ಆದರೆ ಸರಳ ನೇರ ನುಡಿಗಳಲ್ಲಿ ವ್ಯಕ್ತವಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಂಡುವಿನ ಪ್ರಯಾಣ
Next post ಯೌವ್ವನದ ಹಾಡು

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys