ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಂಡು-ಮಾದ್ರಿಯರ ಪ್ರಸಂಗ
Next post ಇಷ್ಟೊಂದು ಚಂದಿರನ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys