Home / ಲೇಖನ / ಇತರೆ / ವಚನ ವಿಚಾರ – ಕಂಡದ್ದು ಕಾಣದ್ದು

ವಚನ ವಿಚಾರ – ಕಂಡದ್ದು ಕಾಣದ್ದು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆಯ ನೋಡಾ
ಕಂಡುದನೆ ಕಂಡು ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರಾ

ಅಲ್ಲಮನ ವಚನ. ಕಂಡದ್ದನ್ನು ಬಿಟ್ಟು ಕಾಣದಿರುವುದನ್ನು ಹುಡುಕಿ ಹಿಡಿಯುತ್ತೇನೆಂದು ಹೊರಟರೆ ಸಿಕ್ಕದು ಎಂಬ ಬಳಲಿಕೆಯಷ್ಟೇ ಆಗುತ್ತದೆ. `ಕಾಣುತ್ತಿರುವುದು’ ಸಾಮಾನ್ಯವೆಂದೂ ಅರ್ಥಹೀನವೆಂದೂ ಬಗೆದು ಕಾಣದ ಸತ್ಯವನ್ನು ಹುಡುಕಿ ನಾವೆಲ್ಲ ಬಳಲುವುದೇ ಹೆಚ್ಚು. ಹೀಗೆ ಕಣ್ಣೆದುರಿಗೆ ಇರುವುದನ್ನು ಸರಿಯಾಗಿ ನೋಡದೆ ಕಾಣದ ಸತ್ಯಕ್ಕೆ ಬಳಲುವುದು ವ್ಯರ್ಥ ಅನ್ನುತ್ತಾನೆ ಅಲ್ಲಮ.

ಕಂಡುದನೆ ಕಂಡು ಅನ್ನುವಾಗ ಕಾಣು ಅನ್ನುವ ಪದದ ಸಮಗ್ರ ಅರ್ಥವನ್ನು ಮನಸ್ಸಿಗೆ ತಂದುಕೊಳ್ಳಬೇಕು. ನೋಡುವುದಕ್ಕೂ ಕಾಣುವುದಕ್ಕೂ ಇರುವ ವ್ಯತ್ಯಾಸವನ್ನೂ ಗಮನಿಸಬೇಕು. ನಾವೆಲ್ಲ ಸಾಮಾನ್ಯವಾಗಿ ಸುಮ್ಮನೆ ನೋಡುವುದೇ ಹೊರತು ಗಮನಿಸಿ ಕಾಣುವುದು ಕಡಮೆ. ಮರವೊಂದನ್ನು ಒಟ್ಟಾರೆಯಾಗಿ ಸುಮ್ಮನೆ ನೋಡುತ್ತೇವೆ, ಅದರ ರಂಬೆ, ಕೊಂಬೆ, ಟಿಸಿಲು, ಎಲೆ, ಕಾಂಡ, ತೊಗಟೆ ಇತ್ಯಾದಿಯಾಗಿ ಇರುವುದನ್ನೆಲ್ಲ ಗಮನಿಸಿ ನೋಡುವುದು ಕಡಮೆ. ಆದ್ದರಿಂದಲೇ ಕಾಣುವುದನ್ನೆ `ಕಂಡರೆ’ ಹಾಗೆ ಕಾಣಿಸಬಲ್ಲ ಗುರುವನ್ನು ಒಪ್ಪಿಕೊಂಡರೆ ಕಾಣದೆ ಇರುವುದು ಕೂಡ ಕಾಣುತ್ತದೆ ಅನ್ನುತ್ತಾನೆ.

ಕಾಣಬಲ್ಲ ಗಮನಕ್ಕೆ ಕಾಣಿಸದ ಸಂಗತಿ ಯಾವುದೂ ಇರಲಾರದು. ಬುದ್ಧಿ ಇದನ್ನು ಒಪ್ಪಿತು, ಆದರೆ ಕಾಣುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಲು ನಮಗೆ ಅಡ್ಡಿಯಾಗಿರುವುದಾದರೂ ಏನು?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...