Home / ಲೇಖನ / ಇತರೆ / ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ
ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ
ಇದು ನಿನಗೆ ದಿಂಡೆಯತನವೊ
ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ

[ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ, ತುಂಟತನ]

ಮೋಳಿಗೆ ಮಾರಯ್ಯನ ವಚನ. ಮನುಷ್ಯನನ್ನು ದೇವರೇ ಸೃಷ್ಟಿಮಾಡಿದ ಎಂದುಕೊಂಡರೆ ಅವನು ಏನೇನನ್ನೂ ಕಲಿಸದೆ ನಮ್ಮನ್ನೆಲ್ಲ ಸೃಷ್ಟಿಮಾಡಿ ಭೂಮಿಗೆ ಕಳುಹಿಸಿಬಿಟ್ಟಿದ್ದಾನೆ. ಕಚ್ಚಲು ಬರುವ ಹಾವನ್ನು ಪಳಗಿಸಲು ಗರುಡ ಮಂತ್ರ ಕಲಿಸಲಿಲ್ಲ, ತಿವಿಯಲು ಬರುವ ಹಸುವಿನ ಕೊಂಬು ಹಿಡಿದು ಬಗ್ಗಿಸಲು ಕಲಿಸಲಿಲ್ಲ. ಹೀಗೆ ಬದುಕಲು ಅಗತ್ಯವಾದ ವಿದ್ಯೆ ಕಲಿಸದೆ ಇದ್ದದ್ದು ದೇವರ ದಿಂಡಿಗತನವೋ? ದಿಣ್ಣೆ ಎಂಬ ಮಾತಿಗೆ ಬಂಡೆ, ಮರದ ಬೊಡ್ಡೆ ಅನ್ನುವ ಅರ್ಥಗಳಲ್ಲದೆ ರೂಕ್ಷತೆ, ತುಂಟತನ ಅನ್ನುವ ಅರ್ಥಗಳೂ ಇವೆ.

ಕೇಡಿನಿಂದ ಪಾರಾಗುವುದು, ಕೇಡನ್ನು ಪಳಗಿಸುವುದು ಇದೇ ನಾವು ಕಲಿಯಬೇಕಾದದ್ದು, ದೇವರು ನಮಗೆ ಕಲಿಸದೆ ಇರುವುದು! ದೇವರು ನಿರಂಗ, ಅಂಗವಿಲ್ಲದವನು. ಬಂಡೆಯಂತೆ ಇರುವವನು. ಅವನಿಗೆ ಒಳಿತು, ಕೆಡುಕು ಎರಡೂ ಇಲ್ಲ. ಕಲಿಸಬೇಕಾದುದನ್ನು ಕಲಿಸದೆ, ನೀವೇ ಕಲಿತುಕೊಳ್ಳಿ ಎಂದು ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ತುಂಟನಂತೆ ಸುಮ್ಮನೆ ಇದ್ದಾನೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...