Home / ಲೇಖನ / ಇತರೆ / ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ
ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ
ಇದು ನಿನಗೆ ದಿಂಡೆಯತನವೊ
ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ

[ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ, ತುಂಟತನ]

ಮೋಳಿಗೆ ಮಾರಯ್ಯನ ವಚನ. ಮನುಷ್ಯನನ್ನು ದೇವರೇ ಸೃಷ್ಟಿಮಾಡಿದ ಎಂದುಕೊಂಡರೆ ಅವನು ಏನೇನನ್ನೂ ಕಲಿಸದೆ ನಮ್ಮನ್ನೆಲ್ಲ ಸೃಷ್ಟಿಮಾಡಿ ಭೂಮಿಗೆ ಕಳುಹಿಸಿಬಿಟ್ಟಿದ್ದಾನೆ. ಕಚ್ಚಲು ಬರುವ ಹಾವನ್ನು ಪಳಗಿಸಲು ಗರುಡ ಮಂತ್ರ ಕಲಿಸಲಿಲ್ಲ, ತಿವಿಯಲು ಬರುವ ಹಸುವಿನ ಕೊಂಬು ಹಿಡಿದು ಬಗ್ಗಿಸಲು ಕಲಿಸಲಿಲ್ಲ. ಹೀಗೆ ಬದುಕಲು ಅಗತ್ಯವಾದ ವಿದ್ಯೆ ಕಲಿಸದೆ ಇದ್ದದ್ದು ದೇವರ ದಿಂಡಿಗತನವೋ? ದಿಣ್ಣೆ ಎಂಬ ಮಾತಿಗೆ ಬಂಡೆ, ಮರದ ಬೊಡ್ಡೆ ಅನ್ನುವ ಅರ್ಥಗಳಲ್ಲದೆ ರೂಕ್ಷತೆ, ತುಂಟತನ ಅನ್ನುವ ಅರ್ಥಗಳೂ ಇವೆ.

ಕೇಡಿನಿಂದ ಪಾರಾಗುವುದು, ಕೇಡನ್ನು ಪಳಗಿಸುವುದು ಇದೇ ನಾವು ಕಲಿಯಬೇಕಾದದ್ದು, ದೇವರು ನಮಗೆ ಕಲಿಸದೆ ಇರುವುದು! ದೇವರು ನಿರಂಗ, ಅಂಗವಿಲ್ಲದವನು. ಬಂಡೆಯಂತೆ ಇರುವವನು. ಅವನಿಗೆ ಒಳಿತು, ಕೆಡುಕು ಎರಡೂ ಇಲ್ಲ. ಕಲಿಸಬೇಕಾದುದನ್ನು ಕಲಿಸದೆ, ನೀವೇ ಕಲಿತುಕೊಳ್ಳಿ ಎಂದು ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ತುಂಟನಂತೆ ಸುಮ್ಮನೆ ಇದ್ದಾನೆ!
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...