Home / ಲೇಖನ / ಇತರೆ / ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ವಚನ ವಿಚಾರ – ಯಾಕೆ ಇದನ್ನೆಲ್ಲ ಕಲಿಸಲಿಲ್ಲ?

ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ
ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ
ಇದು ನಿನಗೆ ದಿಂಡೆಯತನವೊ
ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ

[ಗಾರುಡ-ಹಾವಿನ ವಿಷವನ್ನು ಇಲ್ಲವಾಗಿಸುವ ಗರುಡ ಮಂತ್ರ, ದಿಂಡೆ-ಬಂಡೆ, ಮರದ ಬೊಡ್ಡೆ, ರೂಕ್ಷತೆ, ತುಂಟತನ]

ಮೋಳಿಗೆ ಮಾರಯ್ಯನ ವಚನ. ಮನುಷ್ಯನನ್ನು ದೇವರೇ ಸೃಷ್ಟಿಮಾಡಿದ ಎಂದುಕೊಂಡರೆ ಅವನು ಏನೇನನ್ನೂ ಕಲಿಸದೆ ನಮ್ಮನ್ನೆಲ್ಲ ಸೃಷ್ಟಿಮಾಡಿ ಭೂಮಿಗೆ ಕಳುಹಿಸಿಬಿಟ್ಟಿದ್ದಾನೆ. ಕಚ್ಚಲು ಬರುವ ಹಾವನ್ನು ಪಳಗಿಸಲು ಗರುಡ ಮಂತ್ರ ಕಲಿಸಲಿಲ್ಲ, ತಿವಿಯಲು ಬರುವ ಹಸುವಿನ ಕೊಂಬು ಹಿಡಿದು ಬಗ್ಗಿಸಲು ಕಲಿಸಲಿಲ್ಲ. ಹೀಗೆ ಬದುಕಲು ಅಗತ್ಯವಾದ ವಿದ್ಯೆ ಕಲಿಸದೆ ಇದ್ದದ್ದು ದೇವರ ದಿಂಡಿಗತನವೋ? ದಿಣ್ಣೆ ಎಂಬ ಮಾತಿಗೆ ಬಂಡೆ, ಮರದ ಬೊಡ್ಡೆ ಅನ್ನುವ ಅರ್ಥಗಳಲ್ಲದೆ ರೂಕ್ಷತೆ, ತುಂಟತನ ಅನ್ನುವ ಅರ್ಥಗಳೂ ಇವೆ.

ಕೇಡಿನಿಂದ ಪಾರಾಗುವುದು, ಕೇಡನ್ನು ಪಳಗಿಸುವುದು ಇದೇ ನಾವು ಕಲಿಯಬೇಕಾದದ್ದು, ದೇವರು ನಮಗೆ ಕಲಿಸದೆ ಇರುವುದು! ದೇವರು ನಿರಂಗ, ಅಂಗವಿಲ್ಲದವನು. ಬಂಡೆಯಂತೆ ಇರುವವನು. ಅವನಿಗೆ ಒಳಿತು, ಕೆಡುಕು ಎರಡೂ ಇಲ್ಲ. ಕಲಿಸಬೇಕಾದುದನ್ನು ಕಲಿಸದೆ, ನೀವೇ ಕಲಿತುಕೊಳ್ಳಿ ಎಂದು ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ತುಂಟನಂತೆ ಸುಮ್ಮನೆ ಇದ್ದಾನೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...