ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೌರವ-ಪಾಂಡವರ ವಿದ್ಯಾಭ್ಯಾಸ
Next post ಮುಪ್ಪು

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys