Home / ಲೇಖನ / ಇತರೆ / ವಚನ ವಿಚಾರ – ಕಿರಿದು ಹಿರಿದು

ವಚನ ವಿಚಾರ – ಕಿರಿದು ಹಿರಿದು

ಕರಿ ಘನ ಅಂಕುಶ ಕಿರಿದೆನ್ನಬಹುದೆ
ಬಾರದಯ್ಯಾ
ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ
ಬಾರದಯ್ಯಾ
ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ
ಬಾರದಯ್ಯಾ
ಕೂಡಲಸಂಗಮದೇವಾ

[ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು]

ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನು ಗಮನಿಸುವಷ್ಟು ಸುಲಭವಾಗಿ ಸೂಕ್ಷ್ಮವಾದದ್ದನ್ನು ಗಮನಿಸಲಾರದು. ದೊಡ್ಡ ಆನೆ ಕಣ್ಣಿಗೆ ಕಾಣುತ್ತದೆ, ಅದನ್ನು ನಿಯಂತ್ರಿಸುವ ಅಂಕುಶ ಕಾಣುವುದಿಲ್ಲ. ದಟ್ಟವಾದ ಕತ್ತಲು ಮಾತ್ರವೇ ಮುಖ್ಯವಾಗುತ್ತ ಸ್ವಲ್ಪವಾದರೂ ಬೆಳಕು ನೀಡುವ ಹಣತೆ ಗಮನಕ್ಕೆ ಬರುವುದಿಲ್ಲ. ಆಯಾ ಕ್ಷಣದ ಬದುಕಿನ ಜಂಜಡವೇ ಘನವಾಗಿ ಕಾಣುತ್ತ, ಅಂಥ ಜಂಜಡದ ನಡುವೆಯೂ ಉದಾತ್ತವಾದದ್ದನ್ನು ನೆನೆಯಬಲ್ಲ ಮನಸ್ಸು ಗಮನಕ್ಕೆ ಬರುವುದಿಲ್ಲ.

ಮನಸ್ಸು ಮುಖ್ಯವಲ್ಲ, ಮನಸ್ಸಿಗೆ ಇರುವ ಸಾಧ್ಯತೆಗಳು ಮುಖ್ಯವಲ್ಲ, ಮುಖ್ಯವಾದದ್ದು ಏನಿದ್ದರೂ ಸ್ಥೂಲವಾಗಿ ಎಲ್ಲರಿಗೆ ಎದ್ದು ಕಾಣುವಂಥ ಸಂಗತಿಗಳು ಅಷ್ಟೇ ಎಂಬ ಮನೋಧರ್ಮ ನಮ್ಮ ಕಾಲದಲ್ಲಿ ಪ್ರಬಲಿಸುತ್ತಿದೆ. ಆನೆಯ ಅಪಾರವೆನ್ನಿಸುವ ಶಕ್ತಿಯನ್ನು ನಿಯಂತ್ರಿಸುವುದು ಪುಟ್ಟದೆಂದು ತೋರುವ ಅಂಕುಶ. ಕತ್ತಲೆಯನ್ನು ಕರಗಿಸುವುದು ಪುಟ್ಟ ಹಣತೆ. ಮನಸ್ಸು ಅಂಕುಶವೂ ಹೌದು ಬೆಳಕೂ ಹೌದು. ವ್ಯಕ್ತಿಯ ಮತ್ತು ಸಮಾಜದ ದುರಂತಕ್ಕೆ ಕಾರಣವಾಗಬಹುದಾದ ಮರವೆಯನ್ನು ತೊಲಗಿಸುವ ಶಕ್ತಿಯೂ ಹೌದು. ಮನಸ್ಸನ್ನು ಕಿರಿದು ಎಂದು ತಿಳಿದರೆ ನಮ್ಮ ದೊಡ್ಡ ದೊಡ್ಡ ಸಾಧನೆಗಳೆಲ್ಲವೂ ಅರ್ಥಹೀನವಾಗುತ್ತವೆ.

ಈ ವಚನದಲ್ಲಿ ಬಂದಿರುವ `ನಿಮ್ಮ ನೆನೆವ ಮನ’ ಎಂಬ ಮಾತನ್ನು ಬೇರೆ ರೀತಿಯಲ್ಲೂ ಅರ್ಥ ಮಾಡಿಕೊಳ್ಳಬಹುದು. ನಮ್ಮ ಮನಸ್ಸು ಸಾಮಾನ್ಯವಾಗಿ ಕೇವಲ ನಮ್ಮ ಬಗ್ಗೆಯೇ ಯೋಚಿಸುತ್ತಿರುತ್ತದೆ. ನಮ್ಮ ಎಲ್ಲ ಚಿಂತನೆಗಳ ಕೇಂದ್ರ ನಾವೇ! ನಾನು ಎಂಬುದನ್ನು ಬಿಟ್ಟು ಕ್ಷಣಕಾಲವಾದರೂ ನೀನು ಎಂಬುದನ್ನು ಅಂದರೆ ಇನ್ನೊಬ್ಬ ವ್ಯಕ್ತಿ, ಜನಸಮುದಾಯ, ಲೋಕ, ದೇವರು ಇತ್ಯಾದಿ, ಆಲೋಚಿಸ ಬಲ್ಲ ಅರಿಯಬಲ್ಲ ಮನಸ್ಸು ಮಾತ್ರವೇ ಘನವಾಗಬಲ್ಲುದು. ಹಾಗೆ ಆಗುವುದಕ್ಕೂ ಸೂಕ್ಷ್ಮವಾದ ನಮ್ಮ ಮನಸ್ಸಿನ ಬಗ್ಗೆಯೇ ನಮಗೆ ಎಚ್ಚರ ಮೂಡಬೇಕು ಅಲ್ಲವೆ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...