Home / ಲೇಖನ / ಇತರೆ / ವಚನ ವಿಚಾರ – ಕಲಿಯಬಾರದು

ವಚನ ವಿಚಾರ – ಕಲಿಯಬಾರದು

ಕಲಿಯಬಾರದು ಕಲಿತನವನು
ಕಲಿಯಬಾರದು ವಿವೇಕಸಹಜವನು
ಕಲಿಯಬಾರದು ದಾನಗುಣವನು
ಕಲಿಯಬಾರದು ಸತ್ಪಥವನು
ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ

[ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ]

ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾರದು’ ಎಂಬ ಮಾತನ್ನು ನಿಷೇಧದ ಅರ್ಥದಲ್ಲಿ ನೋಡಬಾರದು. ಕಲಿಯಲು-ಬಾರದು, ಕಲಿಯಲು ಸಾಧ್ಯವಿಲ್ಲ ಎನ್ನುವ ಅರ್ಥವಿದೆ ಅದಕ್ಕೆ ವಚನಗಳಲ್ಲಿ `ಬಾರದು’ ಎಂಬುದು ನಿಷೇಧದ ಅರ್ಥದಲ್ಲಿ ಅಲ್ಲ, ಅಸಾಧ್ಯ ಅನ್ನುವ ಅರ್ಥದಲ್ಲಿ ಬಳಕೆಯಾಗಿದೆ.

ಕಲಿತನ ಅಥವ ಶೌರ್ಯ, ವಿವೇಕ, ಸಹಜತೆ, ದಾನದ ಗುಣ, ಬದುಕಿನ ಒಳ್ಳೆಯ ದಾರಿ ಇವೆಲ್ಲ ಕಲಿಯಲು ಸಾಧ್ಯವಿಲ್ಲದ ಸಂಗತಿಗಳು. ಸ್ವಭಾವಸಹಜವಾಗಿ, ಸಹ-ಜ, ಹುಟ್ಟಿನಿಂದ ಬಂದ ಗುಣಗಳಾಗಿದ್ದರೆ ಇರುತ್ತವೆ, ಇಲ್ಲದಿದ್ದರೆ ಇಲ್ಲ.

ಹಾಗೆ ಸ್ವ-ಭಾವವನ್ನು ಮೀರಲಾಗದ್ದರಿಂದ ಸ್ವ-ಭಾವವೇ ವ್ಯಕ್ತಿಯ ವಿಧಿ. ಬದಲಾಗುವುದಿದ್ದರೆ ಅದು ಸಕಳೇಶ್ವರನ ಕರುಣೆಯಿಂದಷ್ಟೇ ಎನ್ನುತ್ತಾನೆ. ದೊಡ್ಡ ವಾಗ್ವಾದಕ್ಕೆ ಕಾರಣವಾಗಬಲ್ಲ ನಿಲುವು ಇದು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...