Home / ಲೇಖನ / ಇತರೆ / ವಚನ ವಿಚಾರ – ಕಲಿಯಬಾರದು

ವಚನ ವಿಚಾರ – ಕಲಿಯಬಾರದು

ಕಲಿಯಬಾರದು ಕಲಿತನವನು
ಕಲಿಯಬಾರದು ವಿವೇಕಸಹಜವನು
ಕಲಿಯಬಾರದು ದಾನಗುಣವನು
ಕಲಿಯಬಾರದು ಸತ್ಪಥವನು
ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ

[ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ]

ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾರದು’ ಎಂಬ ಮಾತನ್ನು ನಿಷೇಧದ ಅರ್ಥದಲ್ಲಿ ನೋಡಬಾರದು. ಕಲಿಯಲು-ಬಾರದು, ಕಲಿಯಲು ಸಾಧ್ಯವಿಲ್ಲ ಎನ್ನುವ ಅರ್ಥವಿದೆ ಅದಕ್ಕೆ ವಚನಗಳಲ್ಲಿ `ಬಾರದು’ ಎಂಬುದು ನಿಷೇಧದ ಅರ್ಥದಲ್ಲಿ ಅಲ್ಲ, ಅಸಾಧ್ಯ ಅನ್ನುವ ಅರ್ಥದಲ್ಲಿ ಬಳಕೆಯಾಗಿದೆ.

ಕಲಿತನ ಅಥವ ಶೌರ್ಯ, ವಿವೇಕ, ಸಹಜತೆ, ದಾನದ ಗುಣ, ಬದುಕಿನ ಒಳ್ಳೆಯ ದಾರಿ ಇವೆಲ್ಲ ಕಲಿಯಲು ಸಾಧ್ಯವಿಲ್ಲದ ಸಂಗತಿಗಳು. ಸ್ವಭಾವಸಹಜವಾಗಿ, ಸಹ-ಜ, ಹುಟ್ಟಿನಿಂದ ಬಂದ ಗುಣಗಳಾಗಿದ್ದರೆ ಇರುತ್ತವೆ, ಇಲ್ಲದಿದ್ದರೆ ಇಲ್ಲ.

ಹಾಗೆ ಸ್ವ-ಭಾವವನ್ನು ಮೀರಲಾಗದ್ದರಿಂದ ಸ್ವ-ಭಾವವೇ ವ್ಯಕ್ತಿಯ ವಿಧಿ. ಬದಲಾಗುವುದಿದ್ದರೆ ಅದು ಸಕಳೇಶ್ವರನ ಕರುಣೆಯಿಂದಷ್ಟೇ ಎನ್ನುತ್ತಾನೆ. ದೊಡ್ಡ ವಾಗ್ವಾದಕ್ಕೆ ಕಾರಣವಾಗಬಲ್ಲ ನಿಲುವು ಇದು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ