Home / ಲೇಖನ / ಇತರೆ / ವಚನ ವಿಚಾರ – ಕಲಿಯಬಾರದು

ವಚನ ವಿಚಾರ – ಕಲಿಯಬಾರದು

ಕಲಿಯಬಾರದು ಕಲಿತನವನು
ಕಲಿಯಬಾರದು ವಿವೇಕಸಹಜವನು
ಕಲಿಯಬಾರದು ದಾನಗುಣವನು
ಕಲಿಯಬಾರದು ಸತ್ಪಥವನು
ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ

[ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ]

ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾರದು’ ಎಂಬ ಮಾತನ್ನು ನಿಷೇಧದ ಅರ್ಥದಲ್ಲಿ ನೋಡಬಾರದು. ಕಲಿಯಲು-ಬಾರದು, ಕಲಿಯಲು ಸಾಧ್ಯವಿಲ್ಲ ಎನ್ನುವ ಅರ್ಥವಿದೆ ಅದಕ್ಕೆ ವಚನಗಳಲ್ಲಿ `ಬಾರದು’ ಎಂಬುದು ನಿಷೇಧದ ಅರ್ಥದಲ್ಲಿ ಅಲ್ಲ, ಅಸಾಧ್ಯ ಅನ್ನುವ ಅರ್ಥದಲ್ಲಿ ಬಳಕೆಯಾಗಿದೆ.

ಕಲಿತನ ಅಥವ ಶೌರ್ಯ, ವಿವೇಕ, ಸಹಜತೆ, ದಾನದ ಗುಣ, ಬದುಕಿನ ಒಳ್ಳೆಯ ದಾರಿ ಇವೆಲ್ಲ ಕಲಿಯಲು ಸಾಧ್ಯವಿಲ್ಲದ ಸಂಗತಿಗಳು. ಸ್ವಭಾವಸಹಜವಾಗಿ, ಸಹ-ಜ, ಹುಟ್ಟಿನಿಂದ ಬಂದ ಗುಣಗಳಾಗಿದ್ದರೆ ಇರುತ್ತವೆ, ಇಲ್ಲದಿದ್ದರೆ ಇಲ್ಲ.

ಹಾಗೆ ಸ್ವ-ಭಾವವನ್ನು ಮೀರಲಾಗದ್ದರಿಂದ ಸ್ವ-ಭಾವವೇ ವ್ಯಕ್ತಿಯ ವಿಧಿ. ಬದಲಾಗುವುದಿದ್ದರೆ ಅದು ಸಕಳೇಶ್ವರನ ಕರುಣೆಯಿಂದಷ್ಟೇ ಎನ್ನುತ್ತಾನೆ. ದೊಡ್ಡ ವಾಗ್ವಾದಕ್ಕೆ ಕಾರಣವಾಗಬಲ್ಲ ನಿಲುವು ಇದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...