ವಚನ ವಿಚಾರ – ಕಲ್ಲಿನಲಿ ಕಠಿಣ

ವಚನ ವಿಚಾರ – ಕಲ್ಲಿನಲಿ ಕಠಿಣ

ಕಲ್ಲಿನಲ್ಲಿ ಕಠಿಣ
ಖುಲ್ಲರಲ್ಲಿ ದುರ್ಗುಣ
ಬಲ್ಲವರಲ್ಲಿ ಸುಗುಣ
ಉಂಟೆಂದೆಲ್ಲರೂ ಬಲ್ಲರು
ಇಂತೀ ಇವು ಎಲ್ಲರ ಗುಣ
ಅಲ್ಲಿಗಲ್ಲಿಗೆ ಸರಿಯೆಂದು ಗೆಲ್ಲ ಸೋಲಕ್ಕೆ ಹೋರದೆ
ನಿಜವೆಲ್ಲಿತ್ತು ಅಲ್ಲಿಯೆ ಸುಖವೆಂದನಂಬಿಗ ಚೌಡಯ್ಯ

[ಖುಲ್ಲರಲ್ಲಿ-ದುಷ್ಟರಲ್ಲಿ]

ಅಂಬಿಗ ಚೌಡಯ್ಯನ ವಚನ. ಕಲ್ಲಿನಲ್ಲಿ ಕಾಠಿಣ್ಯವಿದೆ, ಕೆಟ್ಟವರಲ್ಲಿ ದುರ್ಗುಣ ಇದೆ, ಬಲ್ಲವರಲ್ಲಿ ಸದ್ಗುಣ ಇದೆ ಅನ್ನುವುದು ಎಲ್ಲರಿಗೂ ಗೊತ್ತಲ್ಲವೇ? ಸರಿ ಮತ್ತೆ. ಸರಿ, ತಪ್ಪು ಎಂಬ ಹೋರಾಟವೇಕೆ? ಇರುವ ನಿಜವನ್ನು ಇರುವಂತೆ ಒಪ್ಪಿದಾಗಲೇ ಸುಖ ಅಲ್ಲವೇ?

ಗೆಲ್ಲುವ ಹಟ ಇದೆಯಲ್ಲ ಅದೇ ಸುಖಕ್ಕೆ ತೊಡಕು. ಲೋಕವನ್ನು ಬದಲಾಯಿಸಬೇಕೆಂಬ ಹಟವೂ ಅಷ್ಟೇ. ಎರಡೂ ಹೋರಾಟಗಳೇ. ಹೋರಾಟ ಇದ್ದಾಗ ಸುಖ ಎಲ್ಲಿರುತ್ತದೆ. `ಅಲ್ಲಿಗಲ್ಲಿಗೆ ಸರಿ’ ಇರುವುದೆಲ್ಲ ಇರುವ ಹಾಗೆ ಇದೆ, ಅದೇ ಸತ್ಯ ಎಂದು ಒಪ್ಪಿಕೊಂಡರೆ ಸಾಕು. ಆದರೆ ಅದೇ ಅತ್ಯಂತ ಕಷ್ಟದ ಕೆಲಸವೂ ಹೌದಲ್ಲವೇ? ನಮ್ಮ ಶಿಕ್ಷಣ, ಸಂಸ್ಕೃತಿ, ಧರ್ಮ ಎಲ್ಲವೂ ಇರುವುದನ್ನು ಇನ್ನು ಹೇಗೋ ಮಾಡಲು ಪ್ರಯತ್ನಿಸುವುದನ್ನೇ ಕಲಿಸುತ್ತವೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದ್ರುಪದನ ಗರ್ವಭಂಗ
Next post ಪಯಣ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys