Home / ಲೇಖನ / ಇತರೆ / ವಚನ ವಿಚಾರ – ಕಲ್ಲಿನಲಿ ಕಠಿಣ

ವಚನ ವಿಚಾರ – ಕಲ್ಲಿನಲಿ ಕಠಿಣ

ಕಲ್ಲಿನಲ್ಲಿ ಕಠಿಣ
ಖುಲ್ಲರಲ್ಲಿ ದುರ್ಗುಣ
ಬಲ್ಲವರಲ್ಲಿ ಸುಗುಣ
ಉಂಟೆಂದೆಲ್ಲರೂ ಬಲ್ಲರು
ಇಂತೀ ಇವು ಎಲ್ಲರ ಗುಣ
ಅಲ್ಲಿಗಲ್ಲಿಗೆ ಸರಿಯೆಂದು ಗೆಲ್ಲ ಸೋಲಕ್ಕೆ ಹೋರದೆ
ನಿಜವೆಲ್ಲಿತ್ತು ಅಲ್ಲಿಯೆ ಸುಖವೆಂದನಂಬಿಗ ಚೌಡಯ್ಯ

[ಖುಲ್ಲರಲ್ಲಿ-ದುಷ್ಟರಲ್ಲಿ]

ಅಂಬಿಗ ಚೌಡಯ್ಯನ ವಚನ. ಕಲ್ಲಿನಲ್ಲಿ ಕಾಠಿಣ್ಯವಿದೆ, ಕೆಟ್ಟವರಲ್ಲಿ ದುರ್ಗುಣ ಇದೆ, ಬಲ್ಲವರಲ್ಲಿ ಸದ್ಗುಣ ಇದೆ ಅನ್ನುವುದು ಎಲ್ಲರಿಗೂ ಗೊತ್ತಲ್ಲವೇ? ಸರಿ ಮತ್ತೆ. ಸರಿ, ತಪ್ಪು ಎಂಬ ಹೋರಾಟವೇಕೆ? ಇರುವ ನಿಜವನ್ನು ಇರುವಂತೆ ಒಪ್ಪಿದಾಗಲೇ ಸುಖ ಅಲ್ಲವೇ?

ಗೆಲ್ಲುವ ಹಟ ಇದೆಯಲ್ಲ ಅದೇ ಸುಖಕ್ಕೆ ತೊಡಕು. ಲೋಕವನ್ನು ಬದಲಾಯಿಸಬೇಕೆಂಬ ಹಟವೂ ಅಷ್ಟೇ. ಎರಡೂ ಹೋರಾಟಗಳೇ. ಹೋರಾಟ ಇದ್ದಾಗ ಸುಖ ಎಲ್ಲಿರುತ್ತದೆ. `ಅಲ್ಲಿಗಲ್ಲಿಗೆ ಸರಿ’ ಇರುವುದೆಲ್ಲ ಇರುವ ಹಾಗೆ ಇದೆ, ಅದೇ ಸತ್ಯ ಎಂದು ಒಪ್ಪಿಕೊಂಡರೆ ಸಾಕು. ಆದರೆ ಅದೇ ಅತ್ಯಂತ ಕಷ್ಟದ ಕೆಲಸವೂ ಹೌದಲ್ಲವೇ? ನಮ್ಮ ಶಿಕ್ಷಣ, ಸಂಸ್ಕೃತಿ, ಧರ್ಮ ಎಲ್ಲವೂ ಇರುವುದನ್ನು ಇನ್ನು ಹೇಗೋ ಮಾಡಲು ಪ್ರಯತ್ನಿಸುವುದನ್ನೇ ಕಲಿಸುತ್ತವೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...