ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರಸು ಮಕ್ಕಳ ಶಸ್ತ್ರವಿದ್ಯಾ ಪ್ರದರ್ಶನ
Next post ಹೃದಯ ರಾಗ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…