Home / ಲೇಖನ / ಇತರೆ / ವಚನ ವಿಚಾರ – ದುಡ್ಡು ಎಂಬ ನಾಯಿ

ವಚನ ವಿಚಾರ – ದುಡ್ಡು ಎಂಬ ನಾಯಿ

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆವೆನಯ್ಯಾ
ಕಾಂಚನಕ್ಕೆ ವೇಳೆಯಲ್ಲದೆ ಲಿಂಗಕ್ಕೆ ವೇಳೆಯಿಲ್ಲ
ಹಡಿಕೆಗೆ ಮೆಚ್ಚಿದ ಸೊಣಗ ಅಮೃತದ ರುಚಿಯ ಬಲ್ಲುದೆ
ಕೂಡಲಸಂಗಮದೇವಾ

[ಕಾಂಚನ-ಚಿನ್ನ, ಹಡಿಕೆ-ಎಲುಬು, ಸೊಣಗ-ನಾಯಿ]

ಬಸವಣ್ಣನ ವಚನ. ದುಡ್ಡು ಎಂಬ ನಾಯಿಯನ್ನು ನಂಬಿಕೊಂಡು ನಿಮ್ಮನ್ನು ಮರೆತುಬಿಟ್ಟೆ. ದುಡ್ಡು ಎಂಬ ನಾಯಿಗೆ ಗಮನಕೊಡುವುದಕ್ಕೆ ಸಮಯವಿರುತ್ತದೆ, ಆದರೆ ನಿಮ್ಮನ್ನು ನೆನೆಯುವುದಕ್ಕೆ ಸಮಯವೇ ಇಲ್ಲ. ಎಲುಬನ್ನು ಮೆಚ್ಚಿದ ನಾಯಿಗೆ ಅಮೃತದ ರುಚಿ ತಿಳಿಯುವುದೆ?

ಏನನ್ನಾದರೂ ಒಂದನ್ನು ಹಿಡಿದುಕೊಳ್ಳದಿದ್ದರೆ ಮನಸ್ಸಿಗೆ ಸಮಾಧಾನವೇ ಇರುವುದಿಲ್ಲ. ಸುಮ್ಮನಿರುವುದು ಅಸಹನೀಯ ಚಡಪಡಿಕೆಯ ಕೆಲಸ. ಮನಸ್ಸಿಗೆ ಇಷ್ಟವಾದ ಸಂಗತಿ ದೊರೆತಾಗ ಸಮಯ ಸರಿದದ್ದೇ ತಿಳಿಯದು. ನಮಗೂ ಮನಸ್ಸಿಗೂ ಅಂತರವಿದ್ದಾಗ ನಾವು ಬಯಸಿದ್ದನ್ನು ಮನಸ್ಸು ಬಯಸದು. ಹಾಗಾದಾಗ ನಮಗೆ ಇಷ್ಟವಿಲ್ಲದ ಸಂಗತಿಯನ್ನು ಕೀಳಾಗಿ ಕಾಣುವುದೊಂದು ಉಪಾಯ. ಎಂಥವರನ್ನೂ ಸೆಳೆಯುವ ಶಕ್ತಿ ಇದೆಯಲ್ಲಾ ದುಡ್ಡಿಗೆ, ಅದನ್ನು ನಾಯಿ ಎಂದು ಹೀಗಳೆದಾದರೂ ಮನಸ್ಸನ್ನು ದೇವರ ಎಡೆಗೆ ತಿರುಗಿಸುವ ಪ್ರಯತ್ನವೋ ಇದು?

ಅದಕ್ಕಿಂತ ಮಿಗಿಲಾಗಿ ಮನಸ್ಸು ಬಯಸಿದ್ದರಲ್ಲಿ ಮುಳುಗಿ ಹೋದರೆ ವೇಳೆಯ ಅರಿವೂ ವೇಳೆಯ ಮೇಲಿನ ಹತೋಟಿಯೂ ತಪ್ಪಿ ಹೋಗುತ್ತದೆ. ಅಯ್ಯೋ ಸಮಯವೇ ಇಲ್ಲವಲ್ಲಾ ಎಂಬ ಸಬೂಬು ಹೊಳೆಯ ತೊಡಗುತ್ತದೆ.

ಟೈಮೇ ಇಲ್ಲ ಅನ್ನುವ ಮಾತು ನಾವೆಲ್ಲ ಸಾಮಾನ್ಯವಾಗಿ ಹೇಳಿಯೇ ಇರುತ್ತೇವೆ. ಯಾವ ಕೆಲಸಕ್ಕೆ ಟೈಮಿಲ್ಲವೋ ಅದು ನಿಜವಾಗಿ ನಮ್ಮ ಮನಸ್ಸಿಗೆ ಒಗ್ಗದ, ಬೇಡದ ಕೆಲಸ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ