Home / ಲೇಖನ / ಇತರೆ / ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...