ವಚನ ವಿಚಾರ – ಕೈಲಾಸ

ವಚನ ವಿಚಾರ – ಕೈಲಾಸ

ಕಾಯಕದಲ್ಲಿ ನಿರತನಾದಡೆ
ಗುರುದರ್ಶನವಾದಡೂ ಮರೆಯಬೇಕು
ಲಿಂಗಪೂಜೆಯಾದಡೂ ಮರೆಯಬೇಕು
ಜಂಗಮ ಮುಂದೆ ನಿಂದಿದ್ದಡೂ ಹಂಗ ಹರಿಯಬೇಕು
ಕಾಯಕವೆ ಕೈಲಾಸವಾದ ಕಾರಣ
ಅಮರೇಶ್ವರಲಿಂಗವಾಯಿತ್ತಾದಡೂ ಕಾಯಕದೊಳಗು

ಆಯ್ದಕ್ಕಿ ಮಾರಯ್ಯನ ವಚನ. ಕಾಯಕವೆ ಕೈಲಾಸ ಅನ್ನುವ ಮಾತನ್ನು ಹೇಳಿದವ ಆಯ್ದಕ್ಕಿ ಮಾರಯ್ಯ. ಈತ ಕಲ್ಯಾಣದಲ್ಲಿ ನೆಲದ ಮೇಲೆ ಚೆಲ್ಲಿದ ಅಕ್ಕಿಯನ್ನು ಆಯ್ದು ಹೊಟ್ಟೆ ಹೊರೆದುಕೊಳ್ಳುವ ಕಾಯಕ ಮಾಡುತ್ತಿದ್ದನಂತೆ.

ಕಾಯಕವೆಂದರೆ ದೇಹ ಶ್ರಮದ ಕೆಲಸ. ಅದರಿಂದ ಹೊಟ್ಟೆಯ ಪಾಡು ನೋಡಿಕೊಳ್ಳಬೇಕು ಅನ್ನುವ ನಂಬಿಕೆ. ಕಾಯಕ ಎಷ್ಟು ಮುಖ್ಯವೆಂದರೆ ವೀರಶೈವರು ಬಹಳ ಮುಖ್ಯವೆನ್ನುವ ಗುರು ಲಿಂಗ ಜಂಗಮ ಎಲ್ಲವನ್ನೂ ಮರೆಯುವಷ್ಟು ಕಾಯಕದಲ್ಲಿ ಮಗ್ನನಾಗಬೇಕು ಅನ್ನುತ್ತಾನೆ. ದೇವರಿದ್ದರೆ ಅವನೂ ಕಾಯಕದಲ್ಲಿಯೇ ಇರುತ್ತಾನೆ. ಕಾಯಕಕ್ಕಿಂತ ದೊಡ್ಡವನಲ್ಲ.

ದೇಹಶ್ರಮವನ್ನೂ ಆಧ್ಯಾತ್ಮವನ್ನೂ ಸಮೀಕರಿಸುವುದಲ್ಲ, ದಿನನಿತ್ಯದ ಬದುಕಿಗೆ ಅಗತ್ಯವಾಗಿ ಮಾಡಲೇಬೇಕಾದ ಕೆಲಸಕ್ಕಿಂತ ಮಿಗಿಲಾಗದ ಆಧ್ಯಾತ್ಮ ಇಲ್ಲ ಅನ್ನುವ ನಿಲುವು ಇದು.

ಕಾಯಕವೆ ಕೈಲಾಸ ಅನ್ನುವ ಮಾತು `ಕಾಯ ವಿಡಿದಿಹನ್ನಬರ’ ಎಂದು ಆರಂಭವಾಗುವ ಮನಸಂದ ಮಾರಿತಂದೆಯ ವಚನದಲ್ಲೂ ಬರುತ್ತದೆ. ಆಯ್ದಕ್ಕಿ ಮಾರಯ್ಯನ ವಚನವೇ ಸ್ವಲ್ಪ ಬದಲಾವಣೆಯೊಂದಿಗೆ ನಂಜುಂಡ ಶಿವನಲ್ಲೂ ಕಾಣುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರಗಿನಮನೆಯಲ್ಲಿ ಪಾಂಡವರು
Next post ಮಧುರಗಾನ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…