Home / ಲೇಖನ / ಇತರೆ / ವಚನ ವಿಚಾರ – ಕಾಲಿಲ್ಲದ ಕುದುರೆ

ವಚನ ವಿಚಾರ – ಕಾಲಿಲ್ಲದ ಕುದುರೆ

ಕಾಲಿಲ್ಲದ ಕುದುರೆಯೇರಿ ರಾವುತಿಕೆಯ ಮಾಡಬೇಕು
ಕಡಿವಾಣವಿಲ್ಲದ ಕುದುರೆಯ ನಿಲ್ಲಿಸಬೇಕು
ಕಾಲಿಲ್ಲದ ಕುದುರೆಯ ಬೀದಿಯಲ್ಲಿ ಕುಣಿಸಾಡಬಲ್ಲಡೆ
ಇಹಲೋಕಕ್ಕೆ ವೀರನೆಂಬೆ ಪರಲೋಕಕ್ಕೆ ಧೀರನೆಂಬೆ
ಆಮುಗೇಶ್ವರಲಿಂಗಕ್ಕೆ ಅಧಿಕನೆಂಬೆ

[ರಾವುತಿಕೆ-ಕುದುರೆಯ ಸವಾರಿ, ಧೀರ-ವಿವೇಕಿ, ಅಧಿಕ-ಹೆಚ್ಚು, ಮಿಗಿಲು]

ಆಮುಗೆ ರಾಯಮ್ಮನ ವಚನ ಇದು. ಇಲ್ಲಿರುವ ಸಂಕೇತ ತೀರ ಸ್ಪಷ್ಟವಾಗಿಯೇ ಇದೆ. ಕುದುರೆಯ ಸವಾರಿ ಕಷ್ಟವಿರಬಹುದು ಆದರೆ ಅಸಾಧ್ಯವಲ್ಲ. ಕಲಿತುಕೊಂಡರೆ ಯಾರು ಬೇಕಾದರೂ ರಾವುತರಾಗಬಹುದು, ಕಲಿತುಕೊಂಡರೆ ಯಾರು ಬೇಕಾದರೂ ಕುದುರೆಯನ್ನು ಕುಣಿಸಬಹುದು. ಓಡುತ್ತಿರುವ ಕುದುರೆಯನ್ನು ನಿಲ್ಲಿಸಲೂಬಹುದು.

ಆದರೆ ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದರ ಸವಾರಿ (ರಾವುತಿಕೆ) ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಆದ್ದರಿಂದಲೇ ಎತ್ತ ಹೋಗುವುದೆಂದು ಅರಿವಾಗದು. ಅದನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ;

ಮನಸ್ಸು ಅನ್ನುವುದು ಕಾಲಿಲ್ಲದ ಕುದುರೆ, ಅದು ನಮ್ಮಿಚ್ಛೆಯಂತೆ ಬೀದಿಯಲ್ಲಿ, ಇತರರಿಗೂ ತಿಳಿಯುವಂತೆ, ಕುಣಿಸಲು ಆಗುವುದಾದರೆ-
ಆಗ ಅಂಥವರನ್ನು ಈ ಲೋಕದ ವೀರರು, ಪರಲೋಕದ ವಿವೇಕಿಗಳು (ಧೀರ-ಧೀ=ವಿವೇಕ, ಬುದ್ಧಿ) ಎನ್ನುತ್ತೇನೆ ಅನ್ನುವುದು ರಾಯಮ್ಮನ ಮಾತು.
ನಾವು ಬಹಳಷ್ಟು ಜನ ಮನಸ್ಸಿನ ಕುದುರೆಯ ಸವಾರರಲ್ಲ, ಕುದುರೆಗೆ ವಶರಾಗಿರುವುದು ಕೂಡ ಗೊತ್ತಿರದಂತೆ ಅದರಿಚ್ಛೆಯಂತೆ ನಡೆಯುತ್ತಾ ಸ್ವತಂತ್ರರೆಂಬ, ಧೀರರೆಂಬ, ವೀರರೆಂಬ ಭ್ರಮೆಯಲ್ಲಿರುವವರು, ಅಲ್ಲವೇ?

ಈ ವಚನದೊಂದಿಗೆ ಅಲ್ಲಮನ ಕೊಟ್ಟ ಕುದುರೆಯನೇರಬಹುದು ಅನ್ನುವ ಸುಪ್ರಸಿದ್ಧವಾದ ವಚನವನ್ನು ಜ್ಞಾಪಿಸಿಕೊಳ್ಳಿ. ಅಲ್ಲೂ ಕುದುರೆಯ ರೂಪಕ ಬಳಕೆಯಾಗಿದೆ, ಬೇರೆಯ ರೀತಿಯಲ್ಲಿ, ಬೇರೆಯ ಉದ್ದೇಶಕ್ಕೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...