Home / ಲೇಖನ / ಇತರೆ / ವಚನ ವಿಚಾರ – ಗುರು ಶಿಷ್ಯರು

ವಚನ ವಿಚಾರ – ಗುರು ಶಿಷ್ಯರು

ಕೃತಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬಡಿದು ಬುದ್ಧಿಯ ಕಲಿಸಿದರೆ
ಆಗಲಿ ಮಹಾಪ್ರಸಾದವೆಂದೆನಯ್ಯಾ
ತ್ರೇತಾಯುಗದಲ್ಲಿ ಶ್ರೀಗುರು ಶಿಷ್ಯಂಗೆ ಬೈದು ಬುದ್ಧಿಯ ಕಲಿಸಿದರೆ
ಆಗಲಿ ಮಹಾಪ್ರಸಾದವೆಂದೆನಯ್ಯಾ
ದ್ವಾಪರದಲ್ಲಿ ಶ್ರೀಗುರು ಶಿಷ್ಯಂಗೆ ಝಂಕಿಸಿ ಬುದ್ಧಿಯ ಕಲಿಸಿದರೆ
ಆಗಲಿ ಮಹಾಪ್ರಸಾದವೆಂದೆನಯ್ಯಾ
ಕಲಿಯುಗದಲ್ಲಿ ಶ್ರೀಗುರು ಶಿಷ್ಯಂಗೆ ವಂದಿಸಿ ಬುದ್ಧಿಯ ಕಲಿಸಿದರೆ
ಆಗಲಿ ಮಹಾಪ್ರಸಾದವೆಂದೆನಯ್ಯಾ
ಗುಹೇಶ್ವರ
ನಿಮ್ಮ ಕಾಲದ ಕಟ್ಟಳೆಯ ಕಲಿತನಕ್ಕೆ ನಾ ಬೆರಗಾದೆನು

ಅಲ್ಲಮನ ವಚನ. ಕೆಲವು ವರ್ಷಗಳ ಹಿಂದೆ ಈ ವಚನದ ಅರ್ಥದ ಬಗ್ಗೆ ದೊಡ್ಡ ಚರ್ಚೆಯೇ ನಡೆದಿತ್ತು. ನಮ್ಮಲ್ಲಿ ನಾಲ್ಕು ಯುಗಗಳ ಕಲ್ಪನೆ ಇದೆಯಲ್ಲವೇ? ಮೊದಲನೆಯ ಕೃತ ಯುಗದಲ್ಲಿ ಗುರುವು ಶಿಷ್ಯನನ್ನು ಬಡಿದು, ನಂತರ ತ್ರೇತಾಯುಗದಲ್ಲಿ ಬೈದು, ದ್ವಾಪರದಲ್ಲಿ ಛೇಡಿಸಿ ಬುದ್ಧಿ ಕಲಿಸುತ್ತಿದ್ದ. ಕಲಿಯುಗದಲ್ಲಿ ಗುರುವು ಶಿಷ್ಯನಿಗೆ ವಂದಿಸಿ ಬುದ್ಧಿ ಕಲಿಸಬೇಕಾಗಿದೆ ಅನ್ನುವ ಮಾತನ್ನು ಅರ್ಥಮಾಡಿಕೊಳ್ಳುವುದು ಹೇಗೆ? ಗುರುವಿನ ಸ್ಥಾನ ತಗ್ಗುತ್ತ ಬಂದಿದೆ ಎಂದೂ ಅಥವಾ ಶಿಷ್ಯ ಸಮರ್ಥನಾಗುತ್ತಾ, ಸೂಕ್ಷ್ಮಜ್ಞನಾಗುತ್ತ ಬಂದಿದ್ದಾನೆ ಎಂದೋ? ಈ ಬಗ್ಗೆ ಪರ ವಿರೋಧ ಚರ್ಚೆ ಸುದೀರ್ಘವಾಗಿ ನಡೆದಿತ್ತು. ನಿಮಗೆ ಏನನ್ನಿಸುತ್ತದೆ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...