Home / ಲೇಖನ / ಇತರೆ / ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...