Home / ಲೇಖನ / ಇತರೆ / ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...