Home / ಲೇಖನ / ಇತರೆ / ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...