ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದ್ರೌಪದಿ ಸ್ವಯಂವರ
Next post ಬದಲಾಗದವರು

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys