Home / ಲೇಖನ / ಇತರೆ / ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು.
ನೋಡಾ ಅಯ್ಯಾ
ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು
ಕಂಭ ಬೆಂದಿತ್ತು ಹಂಸೆ ಹಾರಿತ್ತು
ಗುಹೇಶ್ವರಾ

ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು ಅರ್ಥವಾಗುವುದಕ್ಕೆ ಮೊದಲೇ, ಮನಸ್ಸಿನಲ್ಲಿ ಮನೆಮಾಡಿಕೊಂಡ ವಚನ, ಅರ್ಥ ಏನೇ ಇರಲಿ, ಸ್ಪಟಿಕ ಸ್ಪಷ್ಟವಾದ ಚಿತ್ರವೊಂದನ್ನು ಇದು ಕಟ್ಟಿಕೊಡುತ್ತದೆ.

ಒಂದು ಕೆಂಡದ ಬೆಟ್ಟ. ಕೆಂಡದ ಬೆಟ್ಟದ ಮೇಲೆ ಅರಗಿನ ಕಂಭ, ಅರಗಿನ ಕಂಭದ ಮೇಲೆ ಒಂದು ಹಂಸ. ಅರಗಿನ ಕಂಭ ಬೆಂದು ಹೋಯಿತು. ಅದರ ಮೇಲೆ ಕೂತಿದ್ದ ಹಂಸ ಹಾರಿಹೋಯಿತು.

ಈ ವಚನಕ್ಕೆ ಸಾಂಪ್ರದಾಯಿಕವಾಗಿ ಕೆಂಡದ ಗಿರಿ ಎಂದರೆ ಶಿವನೇ ನಾನು ಎಂಬ ಭಾವ, ಅರಗಿನ ಕಂಭ ಎಂದರೆ ಶರಣನ ಭಾವ, ಹಂಸೆ ಎಂದರೆ ಪರಮಹಂಸ ತತ್ವ ಇತ್ಯಾದಿಯಾಗಿ ವಿವರಿಸುವುದುಂಟು.

ಅದನ್ನೆಲ್ಲ ಬಿಟ್ಟರೂ ಈ ವಚನ ಸಾವನ್ನು ಕುರಿತು ಹೇಳುತ್ತಿದೆಯೋ ಅಥವಾ ಸಾವನ್ನು ವಿವರಿಸುವ ನೆಪದಲ್ಲಿ ಬದುಕಿನ ಚಿತ್ರಕೊಡುತ್ತಿದೆಯೋ ನೋಡಿ.

ಹಂಸವನ್ನು ಜೀವವೆಂದೋ ಆತ್ಮವೆಂದೋ ಒಪ್ಪಿಕೊಳ್ಳೋಣ, ದೇಹವೇ ಅರಗಿನ ಕಂಭ, ಇಡೀ ಬದುಕೇ ಕೆಂಡದ ಬೆಟ್ಟ, ಕೆಂಡದ ಬೆಟ್ಟವಾದ್ದರಿಂದ ಪಕ್ವವಾದರೂ, ಆಗದಿದ್ದರೂ; ಜ್ಞಾನಿಯಾದರೂ ಆಗದಿದ್ದರೂ, ಕಂಭ ಕರಗಿಹೋಗುವುದೇ ನಿಶ್ಚಯ. ಹಾಗೆ ದೇಹ ಕರಗಿದಮೇಲೆ ಜೀವ ಎಲ್ಲಿದ್ದೀತು, ಹಾರಿ ಹೋಯಿತು.

ಬದುಕಿನ ಸ್ಥಿತಿಯ, ದೇಹ ಇಲ್ಲವಾಗುವ ಅನಿವಾರ್ಯತೆಯ, ಸಾವಿನ ಅಪರಿಹಾರ್ಯ ಸ್ಥಿತಿಯ ಮಂಡನೆ ಇದು. ಮಾತಿನಲ್ಲಿ ನಾವು ಹೇಳುವಂತೆ `ಸಾವು ಬರುವುದು’ ಅಲ್ಲ, ಜೀವ `ಹೋಗುವುದು’ ಇಲ್ಲಿನ ಚಿತ್ರ. ಅದು ಉರಿದ ಕಂಬದ ಮೇಲಿನಿಂದ ಹಂಸೆ ಹಾರಿದಷ್ಟೇ ಸಹಜ, ಅನಿವಾರ್ಯ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...