Home / ಲೇಖನ / ಇತರೆ / ವಚನ ವಿಚಾರ – ಅಸಹಾಯಕ

ವಚನ ವಿಚಾರ – ಅಸಹಾಯಕ

ಕೆಸರಲ್ಲಿ ಬಿದ್ದ ಬಡಪಶುವಿನಂತೆ
ಆನು ದೆಸೆದೆಸೆಗೆ ಬಾಯಿ ಬಿಡುತ್ತಿದ್ದೇನೆ
ಅಯ್ಯಾ
ಆರೈವವರಿಲ್ಲ
ಅಕಟಕಟಾ ಪಶುವೆಂದೆನ್ನ
ಕೂಡಲ ಸಂಗಮದೇವ
ಕೊಂಬ ಹಿಡಿದೆತ್ತುವನ್ನಕ್ಕ

[ಆನು-ನಾನು, ಆರೈವರಿಲ್ಲ-ಆರೈಕೆಮಾಡುವವರಿಲ್ಲ]

ಬಸವಣ್ಣನ ಈ ವಚನ ಅಸಹಾಯಕತೆಯನ್ನು ಕುರಿತದ್ದು. ಈ ವಚನವನ್ನು ಕುರಿತು ಹೇಳುತ್ತಾ ಸುಜನಾ ಅವರು ಆಡಿದ ಮಾತುಗಳನ್ನು ಮರೆಯಲು ಆಗಿಲ್ಲ.

ಬಸವಣ್ಣ ಇಲ್ಲಿ ತನ್ನನ್ನು ಕೆಸರಿನಲ್ಲಿ ಸಿಕ್ಕಿಕೊಂಡ ಹಸುವಿಗೆ ಹೋಲಿಸಿಕೊಂಡಿದ್ದಾನೆ. ಅಸಹಾಯಕನಾಗಿ, ನನ್ನನ್ನು ಯಾರೂ ಆರೈಕೆ ಮಾಡುವವರಿಲ್ಲ, ವಿಚಾರಿಸುವವರಿಲ್ಲ, ಕೂಡಲಸಂಗಮನೇ ಬಂದು ಕೊಂಬ ಹಿಡಿದು ಎತ್ತಬೇಕು ಅನ್ನುತ್ತಾನೆ. ಸರಿ. ಆದರೆ ಗಮನಿಸಿ ನೋಡಿ. ಸಾಮಾನ್ಯ ಕವಿಯಾಗಿದ್ದರೆ ಕೊನೆಯ ಸಾಲಿಗೆ ಬರುವವೇಳೆಗೆ `ನನ್ನ ಕೈ ಹಿಡಿದು ಎತ್ತುವವರೆಗೆ’ ಅನ್ನಬಹುದಿತ್ತು. ಆದರೆ ಬಸವಣ್ಣ ಇಲ್ಲಿ ಕೇವಲ ಹಸುವಿನ ಹೋಲಿಕೆಯನ್ನು ಬಳಸುತ್ತಿಲ್ಲ, ರೂಪಕವನ್ನು ಬಳಸುತ್ತಿದ್ದಾನೆ. ಅಲ್ಲ, ತಾನೇ ಕೆಸರಿನಲ್ಲಿ ಸಿಕ್ಕಿಬಿದ್ದ ಹಸುವಾಗಿದ್ದಾನೆ. ಅಷ್ಟು ತನ್ಮಯತೆ ಇರುವುದರಿಂದಲೇ ಕೊನೆಯ ಸಾಲಿನಲ್ಲಿ ಕೊಂಬ ಹಿಡಿದೆತ್ತು ಎಂದಿದ್ದಾನೆ. ಇದು ಸುಜನಾ ಅವರು ಕೊಟ್ಟ ವಿವರಣೆ.

ಮಾತಿನಲ್ಲಿ ತನ್ನನ್ನು ಹಸುವಿಗೆ ಹೋಲಿಸಿಕೊಂಡವನು ತಲ್ಲೀನನಾಗಿ ತಾನೇ ಹಸು ಎಂದು ಭಾವಿಸುವಷ್ಟು ತಾದಾತ್ಮ್ಯ ಹೊಂದುವುದು ಇದೆಯಲ್ಲ ಅದು ಅಪರೂಪ. ಕವಿಗೆ ಮತ್ತು ಭಕ್ತನಿಗೆ ಇಬ್ಬರಿಗೂ ಇಂಥ ತಾದಾತ್ಮ್ಯ ಬೇಕು. ಆಗ ಮಾತ್ರ ಮಾತು ಬರಿಯ ಮಾತಾಗಿ ಉಳಿಯದೆ ಶಕ್ತಿಯಾಗುತ್ತದೆ. ಇಂಥ ತಾಕತ್ತು ಇರುವ ವ್ಯಕ್ತಿ ಮಾತ್ರ ನುಡಿದಂತೆ ನಡೆಯುವ ಮಾತು ಆಡಬಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...