ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಭದ್ರಾ ಪರಿಣಯ
Next post ಆಧುನಿಕ ಅಹಲ್ಯೆಯರು

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

cheap jordans|wholesale air max|wholesale jordans|wholesale jewelry|wholesale jerseys