Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...