Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...