Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...