Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...