Home / ಲೇಖನ / ಇತರೆ / ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ
ನೆರೆ ಮೂರು ಲೋಕವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ

ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ ತಾನು ಏನೋ ಅಗಬೇಕೆಂದು ಬಯಸುತ್ತ, ಆಗಲಿಲ್ಲವೆಂದು ಕೊರಗುತ್ತ ಇರುವ ಪ್ರಾಣಿ. ನನಗೆ ಸಿಕ್ಕ ಕುದುರೆಗಿಂತ ಇನ್ನು ಬೇರೆ ಕುದುರೆ ಸಿಕ್ಕಿದ್ದರೆ ಎಂದು ಬಯಸುತ್ತ, ಅಂಥ ಬಯಕೆಯ ಕುದುರೆ ಸಿಕ್ಕರೆ ಎಂದು ಆಶಿಸಿ ಹಲ್ಲಣವನ್ನು ಬೆನ್ನಮೇಲೆ ಹೊತ್ತು ತಿರುಗುತ್ತ ಇರುತ್ತೇವೆ. ಇದು ವೀರರ ಲಕ್ಷಣವೂ ಅಲ್ಲ, ಧೀರರ ಲಕ್ಷಣವೂ ಅಲ್ಲ.

ತೆಂಗಿನ ಮರ ತಾನು ಹುಣಿಸೆ ಮರವಾಗಬೇಕಿತ್ತು, ಮಲ್ಲಿಗೆ ಗಿಡವಾಗಬೇಕಿತ್ತು ಎಂದು ಬಯಸುತ್ತದೆಯೇ? ನಾವೆಲ್ಲರೂ ಈಗ ಇರುವುದಕ್ಕಿಂತ ಬೇರೆ ಏನೋ ಆಗಬೇಕೆಂದು ಹಂಬಲಿಸುತ್ತ ಅಂಥ ಹಂಬಲದಲ್ಲೇ ಬದುಕನ್ನು ಕಳೆದುಬಿಡುತ್ತೇವಲ್ಲ! ಇಂಥ ಹಂಬಲವೇ ಎಸ್ಕೆಪಿಸಂ ಅಲ್ಲವೆ? ಇರುವ ಸತ್ಯವನ್ನು ಒಪ್ಪಿಕೊಳ್ಳದೆ ಇಷ್ಟವಾಗುವ ಸತ್ಯವನ್ನು, ಪ್ರಿಯವಾಗುವ ಸತ್ಯವನ್ನು ಬರಿದೇ ಹುಡುಕುತ್ತ ಬಳಲುತ್ತೇವೆ. ಹಾಗೆ ಬಳಲುವುದೇ ನಮ್ಮ ದೊಡ್ಡಸ್ತಿಕೆ ಎಂದು ಭ್ರಮಿಸುತ್ತೇವೆ. ವೀರರು, ಧೀರರು ಆದವರು ತಮ್ಮ ಸತ್ಯವನ್ನು ಒಪ್ಪಿಕೊಂಡು ತಮ್ಮ ಪಾಲಿಗೆ ಬಂದ ಕುದುರೆಯನ್ನು ಪಳಗಿಸಿಕೊಳ್ಳಬೇಕು ಅಲ್ಲವೆ? ಇದು `ಆಗುವ’ ಇಂಗ್ಲಿಷಿನಲ್ಲಿ ಬಿಕಮಿಂಗ್ ಅನ್ನುತ್ತಾರಲ್ಲ ಆ ತತ್ವವಲ್ಲ, `ಇರುವ’ ಇಂಗ್ಲಿಶಿನಲ್ಲಿ ಬೀಯಿಂಗ್ ಅನ್ನುವ ತತ್ವ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...