Home / ಲೇಖನ / ಇತರೆ / ವಚನ ವಿಚಾರ – ಸಂಧಿಸುವುದು ಇಲ್ಲ

ವಚನ ವಿಚಾರ – ಸಂಧಿಸುವುದು ಇಲ್ಲ

ಗಂಧವ ವಾಯು ಕೊಂಬಾಗ
ಅದ ತಂದು ಕೂಡಿದವರಾರು
ನಿಂದ ಮರಕ್ಕೆ ಸುಗಂಧ ಹುಟ್ಟುವಾಗ
ಅದ ಬಂಧಿಸಿ ತಂದು ಇರಿಸಿದವರಾರು
ಅವು ತಮ್ಮ ಅಂಗಸ್ವಭಾವದಂತೆ
ನಿಂದ ನಿಜವೆ ತಾನಾಗಿ
ಅಲ್ಲಿ ಬೇರೊಂದು ಸಂದೇಹವ ಸಂಧಿಸಲಿಲ್ಲ
ಎಂದನಂಬಿಗಚೌಡಯ್ಯ

ಗಾಳಿಯು ಸುಗಂಧವನ್ನು ಕೊಳ್ಳುವಾಗ ಅವೆರಡನ್ನೂ ಕೂಡಿಸಿದವರು ಯಾರು, ಸುಮ್ಮನೆ ಇರುವ ಮರಕ್ಕೆ ಸುಂಗಧ ಮೂಡಿದಾಗ ಅದನ್ನು ಮರದಲ್ಲಿ ಬಂಧಿಸಿಟ್ಟವರು ಯಾರು-ಇಂಥ ಪ್ರಶ್ನೆಗಳನ್ನು ಅನೇಕ ಕವಿಗಳು ಚೆಲುವಾದ ಪದ್ಯಗಳನ್ನಾಗಿಸಿದ್ದು ನಮಗೆಲ್ಲಾ ಗೊತ್ತೇ ಇದೆ.

ಈ ವಚನದಲ್ಲಿ ಅಂಬಿಗರ ಚೌಡಯ್ಯನು ಇಂಥ ಸಂದೇಹಗಳನ್ನು `ಸಂಧಿಸುವುದು ಇಲ್ಲ’, ಹೀಗೆ ಪ್ರಶ್ನಿಸಿಕೊಳ್ಳುವುದೇ ತಪ್ಪು ಅನ್ನುತ್ತಿದ್ದಾನೆ. ಯಾಕೆಂದರೆ ಸುಗಂಧ, ಗಾಳಿ, ಮರ ಇವೆಲ್ಲ ತಮ್ಮ ಸಹಜ ಸ್ವಭಾವಕ್ಕೆ ತಕ್ಕಂತೆ (ಅಂಗಸ್ವಭಾವದಂತೆ) ವರ್ತಿಸುತ್ತಿವೆ. ಅವು ನಿಜವಾಗಿ ಹೇಗಿವೆಯೋ ಹಾಗೇ ಇವೆ, ಹಾಗೇ ವರ್ತಿಸುತ್ತಿವೆ. ಹೀಗಿರುವಾಗ ಇದೆಲ್ಲ ಏಕೆ, ಹೇಗೆ ಎಂದು ಪ್ರಶ್ನೆ ಕೇಳುವುದು ಹುಸಿಯಲ್ಲವೇ ಎಂದು ಚೌಡಯ್ಯ ಕೇಳುತ್ತಿರುವಂತಿದೆ.

ಕವಿಗಳಿಗೆ ವಿಸ್ಮಯವಿರಬೇಕು ನಿಜ. ಆದರೆ ವಿಸ್ಮಯಪಡುವುದೂ ಒಂದು ಚಟವಾಗಬಾರದು ಎಂದು ಎಚ್ಚರಿಸುವಂತಿದೆ ಈ ವಚನ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...