ಅಮ್ಮನ ಪಡಿಯಚ್ಚು

ಹಸಿರು ಬಳ್ಳಿ ಛಪ್ಪರ ಕಂಡಾಗ
ನೆನಪಗುತ್ತಾಳೆ ನನಗೆ ಅಮ್ಮ
ಅವಳೇ ಕಟ್ಟಿದ್ದ ಛಪ್ಪರದ ಮೇಲೆ
ಹಾಗಲ, ಹೀರೇ, ಪಡುವಲ ಬಳ್ಳಿ
ಕುಂಬಳಕಾಯಿ ಚಳ್ಳವರೆಯ ಹಸಿರು
ಮನೆಮುಂದೆ ದಟ್ಟ ಹಸಿರು ಹಂದರ
ನೆರಳಿತ್ತು ಮನೆಯ ಹಿಂದೆ ಮುಂದೆ
ಬರೀ ಹಸಿರೇ ಹಸಿರಿತ್ತು.

ಅಮ್ಮನ ಆ ಮನೆಗೀಗ
ಸೊಸೆಯ ಆಗಮನವಾಗಿದೆ
ಮಾಡರ್ನ್ ಸೊಸೆ ಹೇಳುತ್ತಾಳೆ
“ರೀ ನನಗೆ ಶೋ ಗಿಡ ಇಷ್ಟ”
ಮಗ ಕ್ಯಾಕ್ಟಸ್, ಪಾಪಾಸು ತಂದ
ಅದಕ್ಕಿಟ್ಟ ಸಮೃದ್ಧ ನೀರು, ಗೊಬ್ಬರ
ಎಲೆಯಿಲ್ಲ, ಕಾಯಿಯಿಲ್ಲ ನೆರಳಿಲ್ಲ
ಎತ್ತರ ನೋಡಿ ಮಗ ಸಂಭ್ರಮಿಸಿದ.

ಅಮ್ಮ ನನ್ನ ತಲೆತುಂಬ ಎಣ್ಣೆ ಹಚ್ಚಿ
ಹೇನು ತೆಗೆದು, ಸೀ‌ರ್ ಒರೆದು
ನೇರ ತಲೆಮಧ್ಯೆ ಬೈತಲೆ ತೆಗೆದು
ದಿಮ್ಮನೆ ಬಿಗಿದು ಎರಡು ಜಡೆ ಮಡಿಚಿಕಟ್ಟಿ
ಮೂರು ದಿನವಾದರೂ ಹಾಳಾಗದಂತೆ
ಹೆಣೆದ ಜಡೆ ಮೇಲೆ ರಿಬ್ಬನ್ನು
ಕಟ್ಟಿದ್ದ ನನ್ನ ಅಮ್ಮ
ನನಗೀಗಲೂ ನೆನೆಪಾಗುತ್ತಾಳೆ.

ಸುಖದ ಸಮಯದಲ್ಲಿ ನಮಗೆ
ಸಾವಿರಾರು ಬಂದುಗಳು ಮಗಳೇ
ದುಃಖದಲ್ಲಿ ಯಾರೂ ಬರುವುದಿಲ್ಲ
ಇದೇ ಈ ಜಗದ ನಿಯಮ
ತಿಳಿದುಕೋ ಮುದ್ದು ಮಗಳೇ
ನಿನ್ನ ಕಾಲ ಮೇಲೆ ನೀ ನಿಂತು
ಬದುಕುವುದ ಕಲಿತುಕೋ
ಹಂಗಿನ ಅನ್ನ ತಿನ್ನಬೇಡ ಮಗಳೇ
ಎಂದು ಬುದ್ಧಿ ಹೇಳುತ್ತಿದ್ದ ಅಮ್ಮ
ನನಗೀಗಲೂ ನೆನಪಗುತ್ತಾಳೆ.

ಅಮ್ಮ ಬದುಕಿದ್ದಾಳೆ ಇಲ್ಲಿಯೇ
ನನ್ನ ಪಡಸಾಲೆಯ ಮುಂದೆಯೇ
ಅಲ್ಲಿ ನನ್ನ ಮನೆ ಮುಂದಿನ ಛಪ್ಪರದಲಿ
ನಾನು ಬೆಳೆಸಿದ್ದೆ; ಅವರೇ, ಕುಂಬಳಕಾಯಿ
ಹೀರೇ, ಹಾಗಲಕಾಯಿ-ಹಸಿರನ ಮಧ್ಯೆ
ಅಮ್ಮನ ನೆರಳಿದೆ ನೋಡು
ಅಣ್ಣ-ಅತ್ತಿಗೆಯರಿಗೆ ಇದು ಕಾಣದಿರಬಹುದು
ನನ್ನ ಮನೆ ಮುಂದಿನ ಹಂದರದಲಿ
ಹಸಿರು ಜೀವ ಚೇತನ ಕಂಡಾಗ
ನನಗೆ ಅಮ್ಮ ನೆನಪಾಗುತ್ತಾಳೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಕೇರಿಯ ಚಂದ
Next post ಕುರಿಯಮಾತು

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…