Home / ಕವನ / ಕವಿತೆ / ಅಮ್ಮನ ಪಡಿಯಚ್ಚು

ಅಮ್ಮನ ಪಡಿಯಚ್ಚು

ಹಸಿರು ಬಳ್ಳಿ ಛಪ್ಪರ ಕಂಡಾಗ
ನೆನಪಗುತ್ತಾಳೆ ನನಗೆ ಅಮ್ಮ
ಅವಳೇ ಕಟ್ಟಿದ್ದ ಛಪ್ಪರದ ಮೇಲೆ
ಹಾಗಲ, ಹೀರೇ, ಪಡುವಲ ಬಳ್ಳಿ
ಕುಂಬಳಕಾಯಿ ಚಳ್ಳವರೆಯ ಹಸಿರು
ಮನೆಮುಂದೆ ದಟ್ಟ ಹಸಿರು ಹಂದರ
ನೆರಳಿತ್ತು ಮನೆಯ ಹಿಂದೆ ಮುಂದೆ
ಬರೀ ಹಸಿರೇ ಹಸಿರಿತ್ತು.

ಅಮ್ಮನ ಆ ಮನೆಗೀಗ
ಸೊಸೆಯ ಆಗಮನವಾಗಿದೆ
ಮಾಡರ್ನ್ ಸೊಸೆ ಹೇಳುತ್ತಾಳೆ
“ರೀ ನನಗೆ ಶೋ ಗಿಡ ಇಷ್ಟ”
ಮಗ ಕ್ಯಾಕ್ಟಸ್, ಪಾಪಾಸು ತಂದ
ಅದಕ್ಕಿಟ್ಟ ಸಮೃದ್ಧ ನೀರು, ಗೊಬ್ಬರ
ಎಲೆಯಿಲ್ಲ, ಕಾಯಿಯಿಲ್ಲ ನೆರಳಿಲ್ಲ
ಎತ್ತರ ನೋಡಿ ಮಗ ಸಂಭ್ರಮಿಸಿದ.

ಅಮ್ಮ ನನ್ನ ತಲೆತುಂಬ ಎಣ್ಣೆ ಹಚ್ಚಿ
ಹೇನು ತೆಗೆದು, ಸೀ‌ರ್ ಒರೆದು
ನೇರ ತಲೆಮಧ್ಯೆ ಬೈತಲೆ ತೆಗೆದು
ದಿಮ್ಮನೆ ಬಿಗಿದು ಎರಡು ಜಡೆ ಮಡಿಚಿಕಟ್ಟಿ
ಮೂರು ದಿನವಾದರೂ ಹಾಳಾಗದಂತೆ
ಹೆಣೆದ ಜಡೆ ಮೇಲೆ ರಿಬ್ಬನ್ನು
ಕಟ್ಟಿದ್ದ ನನ್ನ ಅಮ್ಮ
ನನಗೀಗಲೂ ನೆನೆಪಾಗುತ್ತಾಳೆ.

ಸುಖದ ಸಮಯದಲ್ಲಿ ನಮಗೆ
ಸಾವಿರಾರು ಬಂದುಗಳು ಮಗಳೇ
ದುಃಖದಲ್ಲಿ ಯಾರೂ ಬರುವುದಿಲ್ಲ
ಇದೇ ಈ ಜಗದ ನಿಯಮ
ತಿಳಿದುಕೋ ಮುದ್ದು ಮಗಳೇ
ನಿನ್ನ ಕಾಲ ಮೇಲೆ ನೀ ನಿಂತು
ಬದುಕುವುದ ಕಲಿತುಕೋ
ಹಂಗಿನ ಅನ್ನ ತಿನ್ನಬೇಡ ಮಗಳೇ
ಎಂದು ಬುದ್ಧಿ ಹೇಳುತ್ತಿದ್ದ ಅಮ್ಮ
ನನಗೀಗಲೂ ನೆನಪಗುತ್ತಾಳೆ.

ಅಮ್ಮ ಬದುಕಿದ್ದಾಳೆ ಇಲ್ಲಿಯೇ
ನನ್ನ ಪಡಸಾಲೆಯ ಮುಂದೆಯೇ
ಅಲ್ಲಿ ನನ್ನ ಮನೆ ಮುಂದಿನ ಛಪ್ಪರದಲಿ
ನಾನು ಬೆಳೆಸಿದ್ದೆ; ಅವರೇ, ಕುಂಬಳಕಾಯಿ
ಹೀರೇ, ಹಾಗಲಕಾಯಿ-ಹಸಿರನ ಮಧ್ಯೆ
ಅಮ್ಮನ ನೆರಳಿದೆ ನೋಡು
ಅಣ್ಣ-ಅತ್ತಿಗೆಯರಿಗೆ ಇದು ಕಾಣದಿರಬಹುದು
ನನ್ನ ಮನೆ ಮುಂದಿನ ಹಂದರದಲಿ
ಹಸಿರು ಜೀವ ಚೇತನ ಕಂಡಾಗ
ನನಗೆ ಅಮ್ಮ ನೆನಪಾಗುತ್ತಾಳೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...