Home / ಕವನ / ಕವಿತೆ / ಅಮ್ಮನ ಪಡಿಯಚ್ಚು

ಅಮ್ಮನ ಪಡಿಯಚ್ಚು

ಹಸಿರು ಬಳ್ಳಿ ಛಪ್ಪರ ಕಂಡಾಗ
ನೆನಪಗುತ್ತಾಳೆ ನನಗೆ ಅಮ್ಮ
ಅವಳೇ ಕಟ್ಟಿದ್ದ ಛಪ್ಪರದ ಮೇಲೆ
ಹಾಗಲ, ಹೀರೇ, ಪಡುವಲ ಬಳ್ಳಿ
ಕುಂಬಳಕಾಯಿ ಚಳ್ಳವರೆಯ ಹಸಿರು
ಮನೆಮುಂದೆ ದಟ್ಟ ಹಸಿರು ಹಂದರ
ನೆರಳಿತ್ತು ಮನೆಯ ಹಿಂದೆ ಮುಂದೆ
ಬರೀ ಹಸಿರೇ ಹಸಿರಿತ್ತು.

ಅಮ್ಮನ ಆ ಮನೆಗೀಗ
ಸೊಸೆಯ ಆಗಮನವಾಗಿದೆ
ಮಾಡರ್ನ್ ಸೊಸೆ ಹೇಳುತ್ತಾಳೆ
“ರೀ ನನಗೆ ಶೋ ಗಿಡ ಇಷ್ಟ”
ಮಗ ಕ್ಯಾಕ್ಟಸ್, ಪಾಪಾಸು ತಂದ
ಅದಕ್ಕಿಟ್ಟ ಸಮೃದ್ಧ ನೀರು, ಗೊಬ್ಬರ
ಎಲೆಯಿಲ್ಲ, ಕಾಯಿಯಿಲ್ಲ ನೆರಳಿಲ್ಲ
ಎತ್ತರ ನೋಡಿ ಮಗ ಸಂಭ್ರಮಿಸಿದ.

ಅಮ್ಮ ನನ್ನ ತಲೆತುಂಬ ಎಣ್ಣೆ ಹಚ್ಚಿ
ಹೇನು ತೆಗೆದು, ಸೀ‌ರ್ ಒರೆದು
ನೇರ ತಲೆಮಧ್ಯೆ ಬೈತಲೆ ತೆಗೆದು
ದಿಮ್ಮನೆ ಬಿಗಿದು ಎರಡು ಜಡೆ ಮಡಿಚಿಕಟ್ಟಿ
ಮೂರು ದಿನವಾದರೂ ಹಾಳಾಗದಂತೆ
ಹೆಣೆದ ಜಡೆ ಮೇಲೆ ರಿಬ್ಬನ್ನು
ಕಟ್ಟಿದ್ದ ನನ್ನ ಅಮ್ಮ
ನನಗೀಗಲೂ ನೆನೆಪಾಗುತ್ತಾಳೆ.

ಸುಖದ ಸಮಯದಲ್ಲಿ ನಮಗೆ
ಸಾವಿರಾರು ಬಂದುಗಳು ಮಗಳೇ
ದುಃಖದಲ್ಲಿ ಯಾರೂ ಬರುವುದಿಲ್ಲ
ಇದೇ ಈ ಜಗದ ನಿಯಮ
ತಿಳಿದುಕೋ ಮುದ್ದು ಮಗಳೇ
ನಿನ್ನ ಕಾಲ ಮೇಲೆ ನೀ ನಿಂತು
ಬದುಕುವುದ ಕಲಿತುಕೋ
ಹಂಗಿನ ಅನ್ನ ತಿನ್ನಬೇಡ ಮಗಳೇ
ಎಂದು ಬುದ್ಧಿ ಹೇಳುತ್ತಿದ್ದ ಅಮ್ಮ
ನನಗೀಗಲೂ ನೆನಪಗುತ್ತಾಳೆ.

ಅಮ್ಮ ಬದುಕಿದ್ದಾಳೆ ಇಲ್ಲಿಯೇ
ನನ್ನ ಪಡಸಾಲೆಯ ಮುಂದೆಯೇ
ಅಲ್ಲಿ ನನ್ನ ಮನೆ ಮುಂದಿನ ಛಪ್ಪರದಲಿ
ನಾನು ಬೆಳೆಸಿದ್ದೆ; ಅವರೇ, ಕುಂಬಳಕಾಯಿ
ಹೀರೇ, ಹಾಗಲಕಾಯಿ-ಹಸಿರನ ಮಧ್ಯೆ
ಅಮ್ಮನ ನೆರಳಿದೆ ನೋಡು
ಅಣ್ಣ-ಅತ್ತಿಗೆಯರಿಗೆ ಇದು ಕಾಣದಿರಬಹುದು
ನನ್ನ ಮನೆ ಮುಂದಿನ ಹಂದರದಲಿ
ಹಸಿರು ಜೀವ ಚೇತನ ಕಂಡಾಗ
ನನಗೆ ಅಮ್ಮ ನೆನಪಾಗುತ್ತಾಳೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...