Home / ಕವನ / ಕವಿತೆ / ಅಮ್ಮನ ಪಡಿಯಚ್ಚು

ಅಮ್ಮನ ಪಡಿಯಚ್ಚು

ಹಸಿರು ಬಳ್ಳಿ ಛಪ್ಪರ ಕಂಡಾಗ
ನೆನಪಗುತ್ತಾಳೆ ನನಗೆ ಅಮ್ಮ
ಅವಳೇ ಕಟ್ಟಿದ್ದ ಛಪ್ಪರದ ಮೇಲೆ
ಹಾಗಲ, ಹೀರೇ, ಪಡುವಲ ಬಳ್ಳಿ
ಕುಂಬಳಕಾಯಿ ಚಳ್ಳವರೆಯ ಹಸಿರು
ಮನೆಮುಂದೆ ದಟ್ಟ ಹಸಿರು ಹಂದರ
ನೆರಳಿತ್ತು ಮನೆಯ ಹಿಂದೆ ಮುಂದೆ
ಬರೀ ಹಸಿರೇ ಹಸಿರಿತ್ತು.

ಅಮ್ಮನ ಆ ಮನೆಗೀಗ
ಸೊಸೆಯ ಆಗಮನವಾಗಿದೆ
ಮಾಡರ್ನ್ ಸೊಸೆ ಹೇಳುತ್ತಾಳೆ
“ರೀ ನನಗೆ ಶೋ ಗಿಡ ಇಷ್ಟ”
ಮಗ ಕ್ಯಾಕ್ಟಸ್, ಪಾಪಾಸು ತಂದ
ಅದಕ್ಕಿಟ್ಟ ಸಮೃದ್ಧ ನೀರು, ಗೊಬ್ಬರ
ಎಲೆಯಿಲ್ಲ, ಕಾಯಿಯಿಲ್ಲ ನೆರಳಿಲ್ಲ
ಎತ್ತರ ನೋಡಿ ಮಗ ಸಂಭ್ರಮಿಸಿದ.

ಅಮ್ಮ ನನ್ನ ತಲೆತುಂಬ ಎಣ್ಣೆ ಹಚ್ಚಿ
ಹೇನು ತೆಗೆದು, ಸೀ‌ರ್ ಒರೆದು
ನೇರ ತಲೆಮಧ್ಯೆ ಬೈತಲೆ ತೆಗೆದು
ದಿಮ್ಮನೆ ಬಿಗಿದು ಎರಡು ಜಡೆ ಮಡಿಚಿಕಟ್ಟಿ
ಮೂರು ದಿನವಾದರೂ ಹಾಳಾಗದಂತೆ
ಹೆಣೆದ ಜಡೆ ಮೇಲೆ ರಿಬ್ಬನ್ನು
ಕಟ್ಟಿದ್ದ ನನ್ನ ಅಮ್ಮ
ನನಗೀಗಲೂ ನೆನೆಪಾಗುತ್ತಾಳೆ.

ಸುಖದ ಸಮಯದಲ್ಲಿ ನಮಗೆ
ಸಾವಿರಾರು ಬಂದುಗಳು ಮಗಳೇ
ದುಃಖದಲ್ಲಿ ಯಾರೂ ಬರುವುದಿಲ್ಲ
ಇದೇ ಈ ಜಗದ ನಿಯಮ
ತಿಳಿದುಕೋ ಮುದ್ದು ಮಗಳೇ
ನಿನ್ನ ಕಾಲ ಮೇಲೆ ನೀ ನಿಂತು
ಬದುಕುವುದ ಕಲಿತುಕೋ
ಹಂಗಿನ ಅನ್ನ ತಿನ್ನಬೇಡ ಮಗಳೇ
ಎಂದು ಬುದ್ಧಿ ಹೇಳುತ್ತಿದ್ದ ಅಮ್ಮ
ನನಗೀಗಲೂ ನೆನಪಗುತ್ತಾಳೆ.

ಅಮ್ಮ ಬದುಕಿದ್ದಾಳೆ ಇಲ್ಲಿಯೇ
ನನ್ನ ಪಡಸಾಲೆಯ ಮುಂದೆಯೇ
ಅಲ್ಲಿ ನನ್ನ ಮನೆ ಮುಂದಿನ ಛಪ್ಪರದಲಿ
ನಾನು ಬೆಳೆಸಿದ್ದೆ; ಅವರೇ, ಕುಂಬಳಕಾಯಿ
ಹೀರೇ, ಹಾಗಲಕಾಯಿ-ಹಸಿರನ ಮಧ್ಯೆ
ಅಮ್ಮನ ನೆರಳಿದೆ ನೋಡು
ಅಣ್ಣ-ಅತ್ತಿಗೆಯರಿಗೆ ಇದು ಕಾಣದಿರಬಹುದು
ನನ್ನ ಮನೆ ಮುಂದಿನ ಹಂದರದಲಿ
ಹಸಿರು ಜೀವ ಚೇತನ ಕಂಡಾಗ
ನನಗೆ ಅಮ್ಮ ನೆನಪಾಗುತ್ತಾಳೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ