ಅವ್ವನ ಸಂಸ್ಕೃತಿ

ಅಮ್ಮ ಒಳಗೊಳಗೇ ಬಂದಳು ಬೆಳೆಸಿದಳು
ಕಠಿಣ ಕಬ್ಬಿಣದ ಕಷ್ಟ ನೋವುಗಳ ಸಹಿಸಿ.
ಕರಗಿಸಿಕೊಂಡಳು ಒಡಲೊಳಗೆ ಕುದಿವ ಲಾವಾ
ಶತಶತಮಾನಗಳ ತಂಪು ತಗುಲಿ ತಂಗಾಳಿ
ತಣ್ಣಗಾಗುತ್ತ ಭೂಮಿಯಾದಳು ಅಮ್ಮ
ಬೆಳೆಸಿದಳು ಮಹಾ ವೃಕ್ಷಗಳ ಅವಳು
ಬೇರು ಬಿಡಿಸಿದಳು ಒಡಲಲ್ಲಿ
ಲೋಕಕ್ಕೆ ತಂಪು ನೀಡಿದಳು
ಗುಡ್ಡಗಾಡುಗಳಲ್ಲಿ ಬುಡಕಟ್ಟುಗಳ ನೆಲೆ
ಪೋಷಿಸಿದಳು ತಂಪೆರೆದಳು ಅವಳು
ಜೀರುಂಡೆಗಳ ಝೇಂಕಾರ ಕೇಳುತ್ತ
ಹಲಸು ಕಿತ್ತಳೆ ಮಾಮರಗಳ ಬೆಳೆಸಿದಳು
ಋತುಮನಗಳ ಪರಿಮಳ ಸೂಸಿದಳು
ಒಣಗಿದೆಲೆಗಳ ಕೊಳೆತ ವಾಸನೆಯಲ್ಲಿ
ನಾಗರೀಕತೆಗಳ ಸುಳಿವಿಲ್ಲ
ಅಮ್ಮನ ಶಾಂತ ಸೆರಗು ಮಾತ್ರ
ದೂರದೂರದ ತನಕ ಹಬ್ಬಿದ ಶಾಂತತೆ
ಹುಲ್ಲು ಹಾಸಿನ ಮೇಲೆ ಅವ್ವನ ಸರಳ ಮುಗ್ಧತೆ
ಬಣ್ಣಬಣ್ಣದಲಿ ಕಣ್ಣು ಮಿಟುಕಿಸುವ ಕಮನಬಿಲ್ಲು
ನೆರಳು ನೀಡಲಾರದು ಭೂತಾಯಿ ಒಡಲಿಗೆ
ಮೋಡಗಳ ನೆರಳು ಬೆಳಕಿನಾಟ ಮಧ್ಯಾಹ್ನ
ಅಮ್ಮನ ಏಕಾಕಿತನಗಳಿಗೆ ತಿವಿಯುವ ಖಾಲಿತನವಿಲ್ಲ
ಬೇಸರವಿಲ್ಲ ಬೆಟ್ಟಕ್ಕೆ ಎಂದಿಗೂ ಕಾಲ ಹೊರೆಯಾಗಿಲ್ಲ
ಒಂದೇ ತರಹದ ಏಕತಾನತೆಯ ಚಿಂತೆ ಅವಳಿಗಿಲ್ಲ
ಅವಳು ಹೆತ್ತು ಹೊತ್ತ ಗರ್ಭದ ಹೊಕ್ಕಳಬಳ್ಳಿ
ಅನನ್ಯ ತಲಸ್ಪರ್ಶಿ ತಾಯ್ತನದ ಮುಖಕಾಂತಿ,
ಅಮ್ಮ ತಟ್ಟಿದ ರೊಟ್ಟಿ ಸುಡುವ ಹೆಂಚಿನ ತಳದಲ್ಲಿ
ಮಿಂಚು ಬಳ್ಳಿಯ ಸರಿದಾಟ, ಕಣ್ಣಮುಚ್ಚಾಲೆ
ಉರಿವ ಕಟ್ಟಿಗೆಯ ಬಿಸಿ ತುಂಬಿದ ಸುವಾಸನೆ
ಆಪ್ತ ದೀಪದ ಬುಡ್ಡಿಯ ಮಂದ ಬೆಳಕು,
ಚಿತ್ರಿಸುವ ತರತರದ ನೆರಳ ಚಿತ್ತಾರಗಳು
ನೋವು ಸಂಕಟಗಳ ಮದ್ಯ ಮಿನುಗಿ
ಲಯವಾದ ಸೂರ್ಯ ಕಿರಣಗಳನ್ನು
ಮುತ್ತಿಟ್ಟು ಋತುಗಳ ಅಪ್ಪುಗೆಯಲ್ಲಿ
ಪ್ರಕೃತಿ ಮಲಗಿತ್ತು ಸುಖ ನಿದ್ರೆಯಲ್ಲಿ
ಅಮ್ಮನ ಮೆಚ್ಚಗಿನ ಮೃದು ಹಚ್ಚಡವ ಹೊದ್ದು
ಒಲೆಯಲ್ಲಿನ ನಿಗಿನಿಗಿಸುವ ಬೆಂಕಿ ಕೆಂಡದಲ್ಲಿ
ಅಮ್ಮನ ನೋವಿನ ನೆಲೆಗಳ ಪ್ರತಿಫಲನವಿತ್ತು
ದೈತ್ಯ ನಿಸರ್ಗದ ನಿಡಿದಾದ ಟೊಂಗೆಗಳಲ್ಲಿ
ಅಮ್ಮನ ಪ್ರೀತಿಯ ಜೀವಜಾಲವಿತ್ತು
ಬೆಟ್ಟದ ನಿಶ್ಚಲ ಕಲ್ಲು ಮಣ್ಣುಗಳಲ್ಲಿ
ಧರ್ಮದರ್ಶಿಗಳ ನೆರಳಿತ್ತು
ಶತಶತಮಾನಗಳಿಂದ ಗಟ್ಟಿಯಾಗಿ ನಿಂತ
ಧೃಢಚಿತ್ತದ ಬೆಟ್ಟದ ಕಲ್ಲುಗಳಲ್ಲಿ
ಅಮ್ಮ ಕಟ್ಟಿದ ಬುಡಕಟ್ಟುಗಳಿದ್ದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವಳ ಹೆಸರು ಇವಳಿಗಿಷ್ಟ
Next post ನನ್ನ ಗೆಳೆಯರು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys