Home / ಕವನ / ಕವಿತೆ / ಅವ್ವನ ಸಂಸ್ಕೃತಿ

ಅವ್ವನ ಸಂಸ್ಕೃತಿ

ಅಮ್ಮ ಒಳಗೊಳಗೇ ಬಂದಳು ಬೆಳೆಸಿದಳು
ಕಠಿಣ ಕಬ್ಬಿಣದ ಕಷ್ಟ ನೋವುಗಳ ಸಹಿಸಿ.
ಕರಗಿಸಿಕೊಂಡಳು ಒಡಲೊಳಗೆ ಕುದಿವ ಲಾವಾ
ಶತಶತಮಾನಗಳ ತಂಪು ತಗುಲಿ ತಂಗಾಳಿ
ತಣ್ಣಗಾಗುತ್ತ ಭೂಮಿಯಾದಳು ಅಮ್ಮ
ಬೆಳೆಸಿದಳು ಮಹಾ ವೃಕ್ಷಗಳ ಅವಳು
ಬೇರು ಬಿಡಿಸಿದಳು ಒಡಲಲ್ಲಿ
ಲೋಕಕ್ಕೆ ತಂಪು ನೀಡಿದಳು
ಗುಡ್ಡಗಾಡುಗಳಲ್ಲಿ ಬುಡಕಟ್ಟುಗಳ ನೆಲೆ
ಪೋಷಿಸಿದಳು ತಂಪೆರೆದಳು ಅವಳು
ಜೀರುಂಡೆಗಳ ಝೇಂಕಾರ ಕೇಳುತ್ತ
ಹಲಸು ಕಿತ್ತಳೆ ಮಾಮರಗಳ ಬೆಳೆಸಿದಳು
ಋತುಮನಗಳ ಪರಿಮಳ ಸೂಸಿದಳು
ಒಣಗಿದೆಲೆಗಳ ಕೊಳೆತ ವಾಸನೆಯಲ್ಲಿ
ನಾಗರೀಕತೆಗಳ ಸುಳಿವಿಲ್ಲ
ಅಮ್ಮನ ಶಾಂತ ಸೆರಗು ಮಾತ್ರ
ದೂರದೂರದ ತನಕ ಹಬ್ಬಿದ ಶಾಂತತೆ
ಹುಲ್ಲು ಹಾಸಿನ ಮೇಲೆ ಅವ್ವನ ಸರಳ ಮುಗ್ಧತೆ
ಬಣ್ಣಬಣ್ಣದಲಿ ಕಣ್ಣು ಮಿಟುಕಿಸುವ ಕಮನಬಿಲ್ಲು
ನೆರಳು ನೀಡಲಾರದು ಭೂತಾಯಿ ಒಡಲಿಗೆ
ಮೋಡಗಳ ನೆರಳು ಬೆಳಕಿನಾಟ ಮಧ್ಯಾಹ್ನ
ಅಮ್ಮನ ಏಕಾಕಿತನಗಳಿಗೆ ತಿವಿಯುವ ಖಾಲಿತನವಿಲ್ಲ
ಬೇಸರವಿಲ್ಲ ಬೆಟ್ಟಕ್ಕೆ ಎಂದಿಗೂ ಕಾಲ ಹೊರೆಯಾಗಿಲ್ಲ
ಒಂದೇ ತರಹದ ಏಕತಾನತೆಯ ಚಿಂತೆ ಅವಳಿಗಿಲ್ಲ
ಅವಳು ಹೆತ್ತು ಹೊತ್ತ ಗರ್ಭದ ಹೊಕ್ಕಳಬಳ್ಳಿ
ಅನನ್ಯ ತಲಸ್ಪರ್ಶಿ ತಾಯ್ತನದ ಮುಖಕಾಂತಿ,
ಅಮ್ಮ ತಟ್ಟಿದ ರೊಟ್ಟಿ ಸುಡುವ ಹೆಂಚಿನ ತಳದಲ್ಲಿ
ಮಿಂಚು ಬಳ್ಳಿಯ ಸರಿದಾಟ, ಕಣ್ಣಮುಚ್ಚಾಲೆ
ಉರಿವ ಕಟ್ಟಿಗೆಯ ಬಿಸಿ ತುಂಬಿದ ಸುವಾಸನೆ
ಆಪ್ತ ದೀಪದ ಬುಡ್ಡಿಯ ಮಂದ ಬೆಳಕು,
ಚಿತ್ರಿಸುವ ತರತರದ ನೆರಳ ಚಿತ್ತಾರಗಳು
ನೋವು ಸಂಕಟಗಳ ಮದ್ಯ ಮಿನುಗಿ
ಲಯವಾದ ಸೂರ್ಯ ಕಿರಣಗಳನ್ನು
ಮುತ್ತಿಟ್ಟು ಋತುಗಳ ಅಪ್ಪುಗೆಯಲ್ಲಿ
ಪ್ರಕೃತಿ ಮಲಗಿತ್ತು ಸುಖ ನಿದ್ರೆಯಲ್ಲಿ
ಅಮ್ಮನ ಮೆಚ್ಚಗಿನ ಮೃದು ಹಚ್ಚಡವ ಹೊದ್ದು
ಒಲೆಯಲ್ಲಿನ ನಿಗಿನಿಗಿಸುವ ಬೆಂಕಿ ಕೆಂಡದಲ್ಲಿ
ಅಮ್ಮನ ನೋವಿನ ನೆಲೆಗಳ ಪ್ರತಿಫಲನವಿತ್ತು
ದೈತ್ಯ ನಿಸರ್ಗದ ನಿಡಿದಾದ ಟೊಂಗೆಗಳಲ್ಲಿ
ಅಮ್ಮನ ಪ್ರೀತಿಯ ಜೀವಜಾಲವಿತ್ತು
ಬೆಟ್ಟದ ನಿಶ್ಚಲ ಕಲ್ಲು ಮಣ್ಣುಗಳಲ್ಲಿ
ಧರ್ಮದರ್ಶಿಗಳ ನೆರಳಿತ್ತು
ಶತಶತಮಾನಗಳಿಂದ ಗಟ್ಟಿಯಾಗಿ ನಿಂತ
ಧೃಢಚಿತ್ತದ ಬೆಟ್ಟದ ಕಲ್ಲುಗಳಲ್ಲಿ
ಅಮ್ಮ ಕಟ್ಟಿದ ಬುಡಕಟ್ಟುಗಳಿದ್ದವು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...