Home / ಕವನ / ಕವಿತೆ / ಕಾಡಿನ ದಾವೇದಾರ

ಕಾಡಿನ ದಾವೇದಾರ

ಸೃಷ್ಟಿ ಸೂಬಗನು ಮೊಗೆ ಮೊಗೆದು ಕುಡಿದು
ಮೌನದರಮನೆಯಲ್ಲಿ ಗರಿ ಬಿಚ್ಚಿದ ಕಥನ
ಹಿಮದೊಳಗಿನ ಬೆಂಕಿಯಂತೆ ಸಂತೈಸಿಕೊಂಡವನು
ಮಣ್ಣ ಕಣದಿಂದ ಮಿಡತೆಯಾಗಿ ಎದ್ದು ಬಂದವನು.

ಹುಲ್ಲು ಗರಿಕೆ ಬಿದಿರ ಮೇಳೆಯ ಕಾಡಿನ
ಜಿನುಗುವ ನೀರ ಒರತೆಯಾಗಿ
ಹುಟ್ಟು ಸಾವುಗಳ ಜಾಡು ಹಿಡಿದವನು
ಕಾಡಿನ ಏಕಾಂತದಲ್ಲಿ ಹಕ್ಕಿಗಳ ಹುಡುಕಾಡಿದವನು.

ಬೊಚ್ಚು ಬಾಯಿಯಲ್ಲಿ ಹಲ್ಲುಗಳು ಹುಟ್ಟಲು
ಗಿಡಮೂಲಿಕೆಗಳ ಶೋಧಿಸಿದವನು.
ಆಗಸದಲ್ಲಿ ಫೈಯಿಂಗ್ ಸಾಸರ್ಸ್ ಹಾರಿಸಿ,
ಮಾಯಾ ಲೋಕದಲ್ಲಿ ಚಂದ್ರನ ಚೂರು ಕಂಡವನು.

ಕಾಡಿನ ಸಂತನ ಪಯಣ ಹುಲಿಯೂರಿನಿಂದ
ಆರಂಭ, ಜುಗಾರಿ ಕ್ರಾಸ್‌ನಲ್ಲಿ ನಿಂತು ನಿರೀಕ್ಷಣೆ,
ಚಿದಂಬರ ರಹಸ್ಯ ಭೇದಿಸುವ ತವಕದಲ್ಲಿ
ಅಬಚೂರಿನ ಪೋಸ್ಟಾಫೀಸಿನ ನಿರ್ಣಾಯಕ ಘಟ್ಟದಲ್ಲಿ.

ಮನುಷ್ಯ ನಿರ್ಮಿತ ನಾಗರೀಕ ಗೋಡೆಗಳಾಚೆ
ತಬರನಿಗಾಗಿ ತುಡಿದು ಚಿಟ್ಟೆ ಏರೋಪ್ಲೇನ್ ಹತ್ತಿದವನು.
ಕಾರ್ವಾಲೋದಿಂದ ಕಿರಗೂರಿನ ಗಯ್ಯಾಳಿಯ ಬಳಿಗೆ
ಭಾವಲೋಕದಲ್ಲಿ ಬ್ರಹ್ಮಾಂಡ ಮೇಳ.

ದೇವರು ದರ್ಮಗಳಿಲ್ಲದ ಲೋಕದಲಿ ವಿಹಾರ,
ಚೀಂಕ್ರನಿಂದ ಅರಿಸ್ಟಾಟಲ್‌ನವರೆಗೆ
ಮನುಷ್ಯರ ಮಿಸ್ಸಿಂಗ್ ಲಿಂಕ್ಸ್ ಜೋಡಿಸುತ್ತ
ವಿಜ್ಞಾನಿ, ಋಷಿಗಳ ಮುಖಾಮುಖಿ ಮಾಡುತ್ತ
ಬದುಕು ಸವೆಸಿದ ನೀನು ಪ್ರವಾದಿಯಲ್ಲ,
ಸಂತನಲ್ಲದ ಸಂತ ಕಾಡಿನ ದಾವೇದಾರ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...