Home / ಕವನ / ಕವಿತೆ / ಕಾಡಿನ ದಾವೇದಾರ

ಕಾಡಿನ ದಾವೇದಾರ

ಸೃಷ್ಟಿ ಸೂಬಗನು ಮೊಗೆ ಮೊಗೆದು ಕುಡಿದು
ಮೌನದರಮನೆಯಲ್ಲಿ ಗರಿ ಬಿಚ್ಚಿದ ಕಥನ
ಹಿಮದೊಳಗಿನ ಬೆಂಕಿಯಂತೆ ಸಂತೈಸಿಕೊಂಡವನು
ಮಣ್ಣ ಕಣದಿಂದ ಮಿಡತೆಯಾಗಿ ಎದ್ದು ಬಂದವನು.

ಹುಲ್ಲು ಗರಿಕೆ ಬಿದಿರ ಮೇಳೆಯ ಕಾಡಿನ
ಜಿನುಗುವ ನೀರ ಒರತೆಯಾಗಿ
ಹುಟ್ಟು ಸಾವುಗಳ ಜಾಡು ಹಿಡಿದವನು
ಕಾಡಿನ ಏಕಾಂತದಲ್ಲಿ ಹಕ್ಕಿಗಳ ಹುಡುಕಾಡಿದವನು.

ಬೊಚ್ಚು ಬಾಯಿಯಲ್ಲಿ ಹಲ್ಲುಗಳು ಹುಟ್ಟಲು
ಗಿಡಮೂಲಿಕೆಗಳ ಶೋಧಿಸಿದವನು.
ಆಗಸದಲ್ಲಿ ಫೈಯಿಂಗ್ ಸಾಸರ್ಸ್ ಹಾರಿಸಿ,
ಮಾಯಾ ಲೋಕದಲ್ಲಿ ಚಂದ್ರನ ಚೂರು ಕಂಡವನು.

ಕಾಡಿನ ಸಂತನ ಪಯಣ ಹುಲಿಯೂರಿನಿಂದ
ಆರಂಭ, ಜುಗಾರಿ ಕ್ರಾಸ್‌ನಲ್ಲಿ ನಿಂತು ನಿರೀಕ್ಷಣೆ,
ಚಿದಂಬರ ರಹಸ್ಯ ಭೇದಿಸುವ ತವಕದಲ್ಲಿ
ಅಬಚೂರಿನ ಪೋಸ್ಟಾಫೀಸಿನ ನಿರ್ಣಾಯಕ ಘಟ್ಟದಲ್ಲಿ.

ಮನುಷ್ಯ ನಿರ್ಮಿತ ನಾಗರೀಕ ಗೋಡೆಗಳಾಚೆ
ತಬರನಿಗಾಗಿ ತುಡಿದು ಚಿಟ್ಟೆ ಏರೋಪ್ಲೇನ್ ಹತ್ತಿದವನು.
ಕಾರ್ವಾಲೋದಿಂದ ಕಿರಗೂರಿನ ಗಯ್ಯಾಳಿಯ ಬಳಿಗೆ
ಭಾವಲೋಕದಲ್ಲಿ ಬ್ರಹ್ಮಾಂಡ ಮೇಳ.

ದೇವರು ದರ್ಮಗಳಿಲ್ಲದ ಲೋಕದಲಿ ವಿಹಾರ,
ಚೀಂಕ್ರನಿಂದ ಅರಿಸ್ಟಾಟಲ್‌ನವರೆಗೆ
ಮನುಷ್ಯರ ಮಿಸ್ಸಿಂಗ್ ಲಿಂಕ್ಸ್ ಜೋಡಿಸುತ್ತ
ವಿಜ್ಞಾನಿ, ಋಷಿಗಳ ಮುಖಾಮುಖಿ ಮಾಡುತ್ತ
ಬದುಕು ಸವೆಸಿದ ನೀನು ಪ್ರವಾದಿಯಲ್ಲ,
ಸಂತನಲ್ಲದ ಸಂತ ಕಾಡಿನ ದಾವೇದಾರ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...