Home / ಕವನ / ಕವಿತೆ / ಕಾಡಿನ ದಾವೇದಾರ

ಕಾಡಿನ ದಾವೇದಾರ

ಸೃಷ್ಟಿ ಸೂಬಗನು ಮೊಗೆ ಮೊಗೆದು ಕುಡಿದು
ಮೌನದರಮನೆಯಲ್ಲಿ ಗರಿ ಬಿಚ್ಚಿದ ಕಥನ
ಹಿಮದೊಳಗಿನ ಬೆಂಕಿಯಂತೆ ಸಂತೈಸಿಕೊಂಡವನು
ಮಣ್ಣ ಕಣದಿಂದ ಮಿಡತೆಯಾಗಿ ಎದ್ದು ಬಂದವನು.

ಹುಲ್ಲು ಗರಿಕೆ ಬಿದಿರ ಮೇಳೆಯ ಕಾಡಿನ
ಜಿನುಗುವ ನೀರ ಒರತೆಯಾಗಿ
ಹುಟ್ಟು ಸಾವುಗಳ ಜಾಡು ಹಿಡಿದವನು
ಕಾಡಿನ ಏಕಾಂತದಲ್ಲಿ ಹಕ್ಕಿಗಳ ಹುಡುಕಾಡಿದವನು.

ಬೊಚ್ಚು ಬಾಯಿಯಲ್ಲಿ ಹಲ್ಲುಗಳು ಹುಟ್ಟಲು
ಗಿಡಮೂಲಿಕೆಗಳ ಶೋಧಿಸಿದವನು.
ಆಗಸದಲ್ಲಿ ಫೈಯಿಂಗ್ ಸಾಸರ್ಸ್ ಹಾರಿಸಿ,
ಮಾಯಾ ಲೋಕದಲ್ಲಿ ಚಂದ್ರನ ಚೂರು ಕಂಡವನು.

ಕಾಡಿನ ಸಂತನ ಪಯಣ ಹುಲಿಯೂರಿನಿಂದ
ಆರಂಭ, ಜುಗಾರಿ ಕ್ರಾಸ್‌ನಲ್ಲಿ ನಿಂತು ನಿರೀಕ್ಷಣೆ,
ಚಿದಂಬರ ರಹಸ್ಯ ಭೇದಿಸುವ ತವಕದಲ್ಲಿ
ಅಬಚೂರಿನ ಪೋಸ್ಟಾಫೀಸಿನ ನಿರ್ಣಾಯಕ ಘಟ್ಟದಲ್ಲಿ.

ಮನುಷ್ಯ ನಿರ್ಮಿತ ನಾಗರೀಕ ಗೋಡೆಗಳಾಚೆ
ತಬರನಿಗಾಗಿ ತುಡಿದು ಚಿಟ್ಟೆ ಏರೋಪ್ಲೇನ್ ಹತ್ತಿದವನು.
ಕಾರ್ವಾಲೋದಿಂದ ಕಿರಗೂರಿನ ಗಯ್ಯಾಳಿಯ ಬಳಿಗೆ
ಭಾವಲೋಕದಲ್ಲಿ ಬ್ರಹ್ಮಾಂಡ ಮೇಳ.

ದೇವರು ದರ್ಮಗಳಿಲ್ಲದ ಲೋಕದಲಿ ವಿಹಾರ,
ಚೀಂಕ್ರನಿಂದ ಅರಿಸ್ಟಾಟಲ್‌ನವರೆಗೆ
ಮನುಷ್ಯರ ಮಿಸ್ಸಿಂಗ್ ಲಿಂಕ್ಸ್ ಜೋಡಿಸುತ್ತ
ವಿಜ್ಞಾನಿ, ಋಷಿಗಳ ಮುಖಾಮುಖಿ ಮಾಡುತ್ತ
ಬದುಕು ಸವೆಸಿದ ನೀನು ಪ್ರವಾದಿಯಲ್ಲ,
ಸಂತನಲ್ಲದ ಸಂತ ಕಾಡಿನ ದಾವೇದಾರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...