ಅವಳುಂಟು ಅವಳ ರೆಕ್ಕೆಯುಂಟು

ಬಾನಂಗಳದಲಿ ಹಾರುವ ಹಕ್ಕಿಗೆ
ಇದೆ ಅದರದೇ ರೆಕ್ಕೆ, ಪುಕ್ಕ, ಕೊಕ್ಕು
ಸ್ವಚ್ಛಂದ ಆಗಸದಲಿ ಗಡಿಗಳಿಲ್ಲದೆ ಲೋಕ
ನಿರ್ಭಂಧಗಳಾಚೆ ತಂಬೆಲರ ತಾಣ.

ಕಟ್ಟು ಕಟ್ಟಳೆ ಲಕ್ಷ್ಮಣರೇಖೆಗಳಾಚೆ
ಬಚ್ಚಿಟ್ಟ ಬೇಗುದಿಗಳ ಗಾಳಿಗೆ ತೂರಿ
ಹಗುರವಾಗುತ್ತಿದ್ದಾಳೆ ಅವಳು
ಇಷ್ಟಿಷ್ಟೇ ಗೋಡೆಗಳ ಲಂಘಿಸುತ್ತಿದ್ದಾಳೆ.

ಕಟ್ಟಿದ್ದ ಹುತ್ತದಲ್ಲಿ ಹಾವಿನ ಸಹವಾಸ,
ಸಾಕಿನ್ನು ಮನೆವಾಸ, ವನವಾಸ,
ಭೂಮಿಪುತ್ರರ ಸಹವಾಸವೂ ಸಾಕು.
ರಾಮ ರಾಜ್ಯದಲ್ಲಿ ಆಜ್ಞೆಪಾಲನೆ ಸಾಕು.

ದುಃಷ್ಯಂತನ ಪ್ರೇಮದುಂಗುರದಲಿ
ನಂಬಿಕೆಯಿಟ್ಟು ನಿರಾಶಳಾಗಿದ್ದು ಸಾಕು,
ಶಾಪಿತ ಅಹಲ್ಯೆ ಕಲ್ಲಾಗುವುದು ಸಾಕು,
ಸೀರೆ ಸೆಳೆಯುವ ಅಪಮಾನ ಸಾಕು ಸಾಕು.

ಬಿರುಮುಡಿಯ ಎತ್ತಿ ಕಟ್ಟಿದ ದೌಪದಿ
ಕಟ್ಟಳೆಗಳ ಮೆಟ್ಟಿ ನಿಂತಿದ್ದಾಳೆ ನೋಡು,
ಲಕ್ಷ್ಮಣ ರೇಖೆಗಳ ದಾಟಿ ಬಂದಿದ್ದಾಳೆ
ಆಕಾಶದಂಗಳಕೆ ಲಗ್ಗೆಯಿಟ್ಟಿದ್ದಾಳೆ.

ಎಲ್ಲ ನಿರ್ಭಂಧಗಳ ಕಿತ್ತೊಗೆದು
ಸೂರ್ಯ ಶಿಕಾರಿಗೆ ಹೊರಟ್ಟಿದ್ದಾಳೆ
ಸ್ವಚ್ಛಂಧ ಆಗಸದಲ್ಲಿ ಹಾರುತ್ತಿದ್ದಾಳೆ
ಮಾನವತೆಯ ಮೇರುಶಿಖರ ಏರುತ್ತಿದ್ದಾಳೆ,
ಏಕೆಂದರೆ ಅವಳುಂಟು ಅವಳ ರೆಕ್ಕೆಯುಂಟು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಲ್ಲು ಕಡ್ಡಿ ಗೂಡು ಕಟ್ಟಿ
Next post ನಾಯಿ ಮರಿ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…