Home / ಕವನ / ಕವಿತೆ / ಆ ದಿನ ಕಂಡೇ ಕಾಣುತ್ತೇವೆ

ಆ ದಿನ ಕಂಡೇ ಕಾಣುತ್ತೇವೆ

ಎಂತಹ ನಿರಂಕುಶ ಪ್ರಭುತ್ವ
ಮಹಾರಥರ ದರ್ಪದ ಸಿಂಹಾಸನ
ರತ್ನಖಚಿತ ಪ್ರಭುಗಳ ಕಿರೀಟಕ್ಕೆ
ಬರಸಿಡಿಲು ಅಪ್ಪಳಿಸಬಹುದು
ಆ ದಿನ ಕಂಡೇ ಕಾಣುತ್ತೇವೆ.

ಮಣಿ, ಮುಕುಟ ಕಿರೀಟಗಳು
ಮಣ್ಣು ಪಾಲಾದವು, ಪದ್ಮನಾಭನ
ಗುಪ್ತಧನ, ಕನಕ ಬಯಲಾದವು
ಗದ್ದುಗೆಯ ನಂಟು ಕಡೆತನಕವಲ್ಲ
ಸಿಂಹಾಸನಗಳು ನುಚ್ಚು ನೂರಾಗುವ
ಆ ದಿನ ಕಂಡೇ ಕಾಣುತ್ತೇವೆ.

ನಿರ್ಲಜ್ಜ ಸುಳ್ಳು ಭರವಸೆಗಳು
ವರಸೆ ಮಾತುಗಳ ಪರಮಾವಧಿ
ಗದ್ದುಗೆಗಳ ಬೇರು ಅದುರುತ್ತಿವೆ.
ಭೂಮಿ ಮೇಲಿನ ಅರಮನೆಗಳು
ಬೆಂಕಿ ಪೊಟ್ಟಣಗಳಂತೆ ಧಗಧಗನೆ
ಭೀಕರ ಉರಿಯುವ ದೃಶ್ಯದ
ಆ ದಿನ ಕಂಡೇ ಕಾಣುತ್ತೇವೆ.

ಓತಿಕಾಟದಂತೆ ಬಣ್ಣ ಬದಲಿಸುವ
ಇವರ ಬಣ್ಣ ಬಯಲಾಗುತ್ತದೆ.
ಇಲ್ಲಿಯೇ ನಮ್ಮ ನಿಮ್ಮೆಲ್ಲರ ಮುಂದೆಯೇ
ನಿರಾಕರಿಸಲ್ಪಟ್ಟ ಅಪರಾಧಗಳು
ಸಾಬೀತಾಗುತ್ತವೆ ಎಲ್ಲರ ಮುಂದೆಯೇ
ಬೆತ್ತಲಾಗುತ್ತಾರೆ ಅವರು
ಆ ದಿನ ಕಂಡೇ ಕಾಣುತ್ತೇವೆ.

ಪ್ರಭುಗಳ ನೆತ್ತಿಯ ಮೇಲೆ
ಅಪಾಯದ ಕತ್ತಿ ಬೀಸುತ್ತಿದೆ
ಸುಳ್ಳು ಭರವಸೆಗಳು ಛಿದ್ರವಾಗಿ
ಪುಡಿಪುಡಿಯಾದ ಒಪ್ಪಂದಗಳು
ಗಾಳಿಯಲಿ ತರಗೆಲೆಯಾಗಿ ಹಾರುವ
ಆ ದಿನ ಕಂಡೇ ಕಾಣುತ್ತೇವೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...