Home / ಕವನ / ಕವಿತೆ / ಆ ದಿನ ಕಂಡೇ ಕಾಣುತ್ತೇವೆ

ಆ ದಿನ ಕಂಡೇ ಕಾಣುತ್ತೇವೆ

ಎಂತಹ ನಿರಂಕುಶ ಪ್ರಭುತ್ವ
ಮಹಾರಥರ ದರ್ಪದ ಸಿಂಹಾಸನ
ರತ್ನಖಚಿತ ಪ್ರಭುಗಳ ಕಿರೀಟಕ್ಕೆ
ಬರಸಿಡಿಲು ಅಪ್ಪಳಿಸಬಹುದು
ಆ ದಿನ ಕಂಡೇ ಕಾಣುತ್ತೇವೆ.

ಮಣಿ, ಮುಕುಟ ಕಿರೀಟಗಳು
ಮಣ್ಣು ಪಾಲಾದವು, ಪದ್ಮನಾಭನ
ಗುಪ್ತಧನ, ಕನಕ ಬಯಲಾದವು
ಗದ್ದುಗೆಯ ನಂಟು ಕಡೆತನಕವಲ್ಲ
ಸಿಂಹಾಸನಗಳು ನುಚ್ಚು ನೂರಾಗುವ
ಆ ದಿನ ಕಂಡೇ ಕಾಣುತ್ತೇವೆ.

ನಿರ್ಲಜ್ಜ ಸುಳ್ಳು ಭರವಸೆಗಳು
ವರಸೆ ಮಾತುಗಳ ಪರಮಾವಧಿ
ಗದ್ದುಗೆಗಳ ಬೇರು ಅದುರುತ್ತಿವೆ.
ಭೂಮಿ ಮೇಲಿನ ಅರಮನೆಗಳು
ಬೆಂಕಿ ಪೊಟ್ಟಣಗಳಂತೆ ಧಗಧಗನೆ
ಭೀಕರ ಉರಿಯುವ ದೃಶ್ಯದ
ಆ ದಿನ ಕಂಡೇ ಕಾಣುತ್ತೇವೆ.

ಓತಿಕಾಟದಂತೆ ಬಣ್ಣ ಬದಲಿಸುವ
ಇವರ ಬಣ್ಣ ಬಯಲಾಗುತ್ತದೆ.
ಇಲ್ಲಿಯೇ ನಮ್ಮ ನಿಮ್ಮೆಲ್ಲರ ಮುಂದೆಯೇ
ನಿರಾಕರಿಸಲ್ಪಟ್ಟ ಅಪರಾಧಗಳು
ಸಾಬೀತಾಗುತ್ತವೆ ಎಲ್ಲರ ಮುಂದೆಯೇ
ಬೆತ್ತಲಾಗುತ್ತಾರೆ ಅವರು
ಆ ದಿನ ಕಂಡೇ ಕಾಣುತ್ತೇವೆ.

ಪ್ರಭುಗಳ ನೆತ್ತಿಯ ಮೇಲೆ
ಅಪಾಯದ ಕತ್ತಿ ಬೀಸುತ್ತಿದೆ
ಸುಳ್ಳು ಭರವಸೆಗಳು ಛಿದ್ರವಾಗಿ
ಪುಡಿಪುಡಿಯಾದ ಒಪ್ಪಂದಗಳು
ಗಾಳಿಯಲಿ ತರಗೆಲೆಯಾಗಿ ಹಾರುವ
ಆ ದಿನ ಕಂಡೇ ಕಾಣುತ್ತೇವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...