Home / ಕವನ / ಕವಿತೆ / ಕನಸು ಹೊಸೆಯುವಾಸೆ

ಕನಸು ಹೊಸೆಯುವಾಸೆ

ಚೂರಾದ ಕನ್ನಡಿ ಜೋಡಿಸಿ
ಪ್ರತಿಬಿಂಬ ಕಾಣುವ ತವಕ
ಹರಡಿದ ತುಂಡು ಕನಸುಗಳ
ಹರಿದ ಚಿಂದಿಗಳ ಹೊಂದಿಸಿ
ಎಲೆ ಚಂಚಿ ಹೊಲಿಯುವಾಸೆ

ಬಿರಿದ ಹಾಳು ಗೋಡೆಗಳಲ್ಲಿ
ಹುಟ್ಟಿದ ಹುಲ್ಲು ಗರಿಕೆ, ಹುತ್ತಗಳು
ಬೆಳದಿಂಗಳ ಆ ಬಯಲಿನಲಿ
ಲಾಂದ್ರದ ಮಂದ್ರ ಬೆಳಕು
ಚಂದ್ರನಿಗೆ ನಾಚಿಕೆ ಮೂಡಿಸುವಾಸೆ.

ಮೌನದ ಪರದೆಯಲಿ ಏಕಾಂಗಿ
ಕಮಲದ ಮೇಲಣ ಜಲಬಿಂದು
ಪಾರದರ್ಶಕ ಸ್ಪಟಿಕದ ಬೆಳದಿಂಗಳು
ಕನಸು ಚೆಲ್ಲಿದ ನದಿಯ ಹರವು
ಶಬ್ದ ಮಡುತ್ತ ಹರಿಯುವಾಸೆ.

ಹೊಸೆದ ಕನಸುಗಳ ಪೋಣಿಸಿ
ಸೋರಿ ಹೋಗುವ ವಾಸ್ತವಗಳ
ಕತ್ತಲೆಗೆ ಬೆವರುವ ಶಬ್ದಗಳ
ಉಸುಕಿನೊಳಗಿಂದ ಒಸರುವ ನೀರು
ಜೀವಪೋಷಕವಾಗಿ ಹರಿಸುವಾಸೆ.

ಬೇಡವೆಂದರೂ ಕೂಗುತ್ತಿದ್ದ ಸೈರನ್ನು
ಆಗಸದಿಂದ ಸುರಿದ ಆಲಿಕಲ್ಲಿನ
ಹೆಪ್ಪುಗಟ್ಟಿದ್ದ ಕೆಂಪು ರಕ್ತವಿತ್ತು
ವಿನಾಶದ ಸೂಚನೆಯಿತ್ತು
ಮುಚ್ಚಿಟ್ಟ ಗುಟ್ಟು ಬಿಚ್ಚಿ ತೋರಿಸುವಾಸೆ.

ಪರದೆಯ ಹಿಂದಿನ ಅವಳ ಕಣ್ಣು
ಅಮೂರ್ತದ ನೆರಳಿನ ಭಾರ
ಸ್ಮಶಾನದಲ್ಲಿ ಇಟ್ಟ ಹೆಜ್ಜೆಗಳು
ಸುಟ್ಟ ಬಾಗಿಲಿನ ಚೌಕಟ್ಟುಗಳಾಚೆ
ಕರಕಲಾದ ಅವಳ ಕರಳುಗಳ
ತೆರೆದು ಲೋಕಕೆ ತೋರಿಸುವಾಸೆ.

ಮಣ್ಣಿನ ಕಣಕಣದಲ್ಲಿ ಪ್ರತಿರೂಪ
ಅತಂತ್ರದ ಅಹವಾಲುಗಳ ಅಂಗಳದಲ್ಲಿ
ಮರುಜೀವ ಪಡೆದು ನಳನಳಿಸಿದ
ಆಗಸದ ಚುಕ್ಕಿ ತಾರೆಗಳ ಹುಡುಕುತ್ತ
ಸ್ಥಬ್ದ ವೃತ್ತದಲ್ಲಿ ಶಬ್ದ ಮಡುತ್ತ
ನಾಳಿನ ಕನಸುಗಳ ಹೊಸೆಯುವಾಸೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...