Home / ಕವನ / ಕವಿತೆ / ಗಡಿಯಲ್ಲಿ ಕಾವ್ಯ

ಗಡಿಯಲ್ಲಿ ಕಾವ್ಯ

ಸುಮ್ಮನೆ ಬಿದ್ದಿರುವ ಉದ್ದುದ್ದ ಸರಹದ್ದು
ಎತ್ತೆರತ್ತರಕ್ಕೆ ಬೆಳೆದ ದೇವದಾರುಗಳು
ಅಸ್ತಿತ್ವ ಅಲುಗಾಡುವ ಯಾತನೆಗಳ ಮಧ್ಯೆ
ಶಬ್ದ ಮೀರಿದ ಸಂಕಟಗಳ ನುಂಗಿ
ದೀರ್ಘ ಬದುಕಿನ ವಿಷಾದಗಳ ಮರೆತು
ಗುನಿಗುನಿಸಿ ಹಾಡುತ್ತಿದೆ ನೋಡು ಗಡಿಯಲ್ಲಿ
ಸರಹದ್ದುಗಳೇ ಇಲ್ಲದ ಮಹಾಕಾವ್ಯ.

ನನ್ನ ಕಾವ್ಯದ ಒಂದೊಂದು ಅಕ್ಷರವೂ
ನೂರಾರು ಪ್ರತಿಮೆಗಳ ಮೂಡಿಸುತ್ತಲೇ
ಅರ್ಥವಿಲ್ಲದ ಸರಹದ್ದುಗಳ ಅಳಿಸುತ್ತದೆ
ಮಾನವ ಕಾವ್ಯದ ಒಂದೊಂದು ಸ್ವರವೂ
ಅನಂತ ಆಗಸದಲಿ
ಸ್ನೇಹದ ಬಣ್ಣ ಹರಡುತ್ತಿದೆ.
ಸರಹದ್ದುಗಳೇ ಇಲ್ಲದ ಕಾವ್ಯ
ಗುನುಗುನಿಸಿ ಹಾಡುತ್ತಿದೆ.
ಎರಡು ದೇಶಗಳ ಮಧ್ಯೆ ಎಳೆದ ರೇಖೆಗಳನು
ಎಡಬಿಡದೇ ಸುರಿದ ಮಳೆ ಅಳಿಸಬಹುದೆ?
ಗುನುಗುನಿಸಿ ಹಾಡಿದ ನನ್ನ
ಮೇಘ ಮಲ್ಹಾರದ ರಾಗ
ಹೇಗೆ ಮುರಿಯುತ್ತದೆ ನೋಡು
ಗಡಿಗಳ ಗೋಡೆ ಸರಹದ್ದು ಸರಪಳಿಗಳನು
ಲೋಕವೇ ನಿದ್ದೆಯ ತೆಕ್ಕೆಗೆ ಜಾರಿರಲು
ಗಸ್ತು ನಿಂತಿದೆ ನೋಡು ಗಡಿಯಲ್ಲಿ ಕಾವ್ಯ.

ಬೇಕಿಲ್ಲ ಗನ್ನು ಬಂದೂಕು ಮಿಸಾಯಿಲ್ಲು ನನಗೆ
ಹೃದಯ ಬೆಸೆಯುವ ಜೀವಂತ ಕಾವ್ಯವಿದೆಯಲ್ಲ?
ನನ್ನವರ ಹಾಡಿಗೆ ಗಡಿಯಾಚೆಗಿನ
ಅವರೂ ಹಾಡುತ್ತಿದ್ದಾರೆ
ನೋಡು, ನನ್ನವರ ಹೆಜ್ಜೆಯೊಂದಿಗೆ
ಅವರೂ ಕುಣಿಯುತ್ತಿದ್ದಾರೆ
ಹೇಗೆ ಅರಳುತ್ತಿದೆ ನೋಡು ಗಡಿಯಲ್ಲಿ
ನಿರ್ಭಂಧಗಳೇ ಇಲ್ಲದ ಮಾನವ ಕಾವ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...